ರಾಜಸ್ತಾನ ವಿಧಾನಸಭೆ ಚುನಾವಣೆ: ಬಿಜೆಪಿ ತೊರೆದ ರಾಮ್ಗರ್ ಶಾಸಕ ಜ್ಞಾನ್ ದೇವ್
ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾದ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿರುವ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಅಹುಜಾ ಬಿಜೆಪಿ ತೊರೆದು ಸ್ವತಂತ್ರ ಅಭ್ಯಥರ್ಿಯಾಗಿ ಚುನಾವಣೆಯಲ್ಲಿ ಸ್ಪಧರ್ಿಸುವುದಾಗಿ ಘೋಷಿಸಿದ್ದಾರೆ. ಅಹುಜಾ ಜತೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾದ ಹಲವು ಶಾಸಕರು ಮತ್ತು ರಾಜ್ಯ ಸಚಿವರೊಬ್ಬರು ಪಕ್ಷ ತೊರೆದಿದ್ದಾರೆ.
ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನನ್ನ ಹೆಸರನ್ನು ಕೈಬಿಡಲಾಗಿದೆ. ನನ್ನ ಹೆಸರನ್ನು ಕೈಬಿಟ್ಟರೇಕೆ ಎಂದು ಕೂಡ ಕಾರಣ ನೀಡಲಿಲ್ಲ. ನನ್ನ ಬೆಂಬಲಿಗರು ಮತ್ತು ಕುಟುಂಬ ಸದಸ್ಯರ ಒತ್ತಡದಿಂದಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದೆ. ಸಂಗನೇರ್ ಕ್ಷೇತ್ರದಿಂದ ಟಿಕೆಟ್ ಕೇಳಿದೆ, ಆದರೆ ಪಕ್ಷದವರು ನೀಡಲಿಲ್ಲ. ಈ ಬಾರಿ ಚುನಾವಣೆಯಲ್ಲಿ ಸಂಗನೇರ್ ಕ್ಷೇತ್ರದಿಂದ ಸ್ವತಂತ್ರ ಅಭ್ಯಥರ್ಿಯಾಗಿ ಕಣಕ್ಕಿಳಿಯುತ್ತಿದ್ದೇನೆ ಎಂದಿರುವ ಅಹುಜಾ, ಬಿಜೆಪಿ ರಾಜ್ಯಾಧ್ಯಕ್ಷ ಮದನ್ ಲಾಲ್ ಸೈನಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 7ರಂದು ನಡೆಯುವ ರಾಜಸ್ಥಾನ ಚುನಾವಣೆಗೆ ಕಳೆದವಾರ ಬಿಜೆಪಿ ಅಭ್ಯಥರ್ಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಒಟ್ಟು ಮೂರು ಪಟ್ಟಿಗಳನ್ನು ಬಿಡುಗಡೆ ಮಾಡಲಿರುವ ಪಕ್ಷ 200 ಅಭ್ಯಥರ್ಿಗಳಲ್ಲಿ 170 ಅಭ್ಯಥರ್ಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 