ರಾಜಸ್ತಾನ ವಿಧಾನಸಭೆ ಚುನಾವಣೆ: ಬಿಜೆಪಿ ತೊರೆದ ರಾಮ್ಗರ್ ಶಾಸಕ ಜ್ಞಾನ್ ದೇವ್
ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾದ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿರುವ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಅಹುಜಾ ಬಿಜೆಪಿ ತೊರೆದು ಸ್ವತಂತ್ರ ಅಭ್ಯಥರ್ಿಯಾಗಿ ಚುನಾವಣೆಯಲ್ಲಿ ಸ್ಪಧರ್ಿಸುವುದಾಗಿ ಘೋಷಿಸಿದ್ದಾರೆ. ಅಹುಜಾ ಜತೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾದ ಹಲವು ಶಾಸಕರು ಮತ್ತು ರಾಜ್ಯ ಸಚಿವರೊಬ್ಬರು ಪಕ್ಷ ತೊರೆದಿದ್ದಾರೆ.
ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನನ್ನ ಹೆಸರನ್ನು ಕೈಬಿಡಲಾಗಿದೆ. ನನ್ನ ಹೆಸರನ್ನು ಕೈಬಿಟ್ಟರೇಕೆ ಎಂದು ಕೂಡ ಕಾರಣ ನೀಡಲಿಲ್ಲ. ನನ್ನ ಬೆಂಬಲಿಗರು ಮತ್ತು ಕುಟುಂಬ ಸದಸ್ಯರ ಒತ್ತಡದಿಂದಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದೆ. ಸಂಗನೇರ್ ಕ್ಷೇತ್ರದಿಂದ ಟಿಕೆಟ್ ಕೇಳಿದೆ, ಆದರೆ ಪಕ್ಷದವರು ನೀಡಲಿಲ್ಲ. ಈ ಬಾರಿ ಚುನಾವಣೆಯಲ್ಲಿ ಸಂಗನೇರ್ ಕ್ಷೇತ್ರದಿಂದ ಸ್ವತಂತ್ರ ಅಭ್ಯಥರ್ಿಯಾಗಿ ಕಣಕ್ಕಿಳಿಯುತ್ತಿದ್ದೇನೆ ಎಂದಿರುವ ಅಹುಜಾ, ಬಿಜೆಪಿ ರಾಜ್ಯಾಧ್ಯಕ್ಷ ಮದನ್ ಲಾಲ್ ಸೈನಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 7ರಂದು ನಡೆಯುವ ರಾಜಸ್ಥಾನ ಚುನಾವಣೆಗೆ ಕಳೆದವಾರ ಬಿಜೆಪಿ ಅಭ್ಯಥರ್ಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಒಟ್ಟು ಮೂರು ಪಟ್ಟಿಗಳನ್ನು ಬಿಡುಗಡೆ ಮಾಡಲಿರುವ ಪಕ್ಷ 200 ಅಭ್ಯಥರ್ಿಗಳಲ್ಲಿ 170 ಅಭ್ಯಥರ್ಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 