ಹಾವೇರಿ : ಪೊಲೀಸ್ರಿಂದ ಮತದಾನ ಪ್ರತಿಜ್ಞಾವಿಧಿ ಸ್ವೀಕಾರ
ಹಾವೇರಿ ೦೨: ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಪೇದೆಗಳು ಹಾಗೂ ಕುಟುಂಬದ ಸದಸ್ಯರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಚಲಾಯಿಸುವ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.
ಕೆರೆಮತ್ತಿಹಳ್ಳಿ ಪೊಲೀಸ್ ಪರೇಡ್ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲೀಲಾವತಿ ಪೊಲೀಸ್ರಿಗೆ ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿಭಯರೇತರಾಗಿ ಮತ್ತು ಧರ್ಮಮ ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.
ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. ಇದೇ ಎಪ್ರಿಲ್ 23 ರ ಮಂಗಳವಾರ ಬೆಳಿಗ್ಗೆ 7 ರಿಂದ 6 ಗಂಟೆವರೆಗೆ ನಡೆಯುವ ಮತದಾನದಲ್ಲಿ ಅರ್ಹ ಮತದಾರರು ತಪ್ಪದೇ ಭಾಗವಹಿಸಿ ಮತ ಚಲಾಯಿಸಿ ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ನಿವೃತ್ತ ಪಿ.ಎಸ್.ಐ. ಎಫ್. ಎಂ.ಹಂಸನೂರ ಹಾಗೂ ವಿವಿಧ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 