ಹೊಸಪೇಟೆ: ಬಿಎಂಎಂ ಕಂಪನಿಯಿಂದ ಅಧಿಕ ಯೋಜನೆಗಳು ಜಾರಿ: ಗಣೇಶ್
ಲೋಕದರ್ಶನ ವರದಿ
ಹೊಸಪೇಟೆ 21: ಶೈಕ್ಷಣಿಕ ಅಭಿವೃದ್ಧಿಗಾಗಿ ಬಿಎಂಎಂ ಕಂಪನಿಯಿಂದ ಇನ್ನಷ್ಟು ಅಧಿಕ ಯೋಜನೆಗಳನ್ನು ಜಾರಿಗೊಳಿಸಲು ಆಡಳಿತ ಮಂಡಳಿ ಜತೆಯಲ್ಲಿ ಚರ್ಚಿಸಲಾಗಿದೆ ಎಂದು ಬಿಎಂಎಂ ಕಂಪನಿಯ ಆಡಳಿತ ಅಧಿಕಾರಿ ಗಣೇಶ್ ಹೆಗಡೆ ಹೇಳಿದರು.
ಸಮೀಪದ 114 ಡಣಾಪುರ ಗ್ರಾಮದಸರ್ಕಾರಿ ಪ್ರೌಢಶಾಲೆಯಲ್ಲಿ ಬಿಎಂಎಂ ಕಂಪನಿಯಿಂದ ಬುಧವಾರ ಹಮ್ಮಿಕೊಂಡಿದ್ದ ನೋಟ್ ಪುಸ್ತಕ ವಿತರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತ ಯೋಜನೆಗಳನ್ನು ಕಂಪನಿಯಿಂದ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾಥರ್ಿಗಳು ಜಾಗತೀಕ ಜೀವನ ಶೈಲಿಗೆ ಹೊಂದಿಕೊಳ್ಳುವಂತ ಟಿಕ್ನಾಲಜಿ ಬರಿತ ಶಿಕ್ಷಣ ನೀಡಬೇಕೆನ್ನುವ ಚಿಂತನೆ ನಡೆಸಲಾಗಿದ್ದು, ಕಂಪನಿ ಆಡಳಿತದ ಒಪ್ಪಿಗೆ ಸಿಕ್ಕ ಬಳಿಕ ಒಂದೊಂದಾಗಿ ಪೂರೈಸಲಾಗುವುದು ಎಂದರು.
ಗ್ರಾಪಂ ಅಧ್ಯಕ್ಷ ಸಿ.ಎ.ಗಾಳೆಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಗರಗ ಪ್ರಕಾಶ್, ಹಳ್ಳಿ ನಿಂಗಪ್ಪ, ವಿ.ಯಮನೂರ, ಹೊಸಪನಿ ಗಾಳೆಪ್ಪ, ಮಜ್ಗಿ ನಾಗರಾಜ್, ಈ.ಪಕ್ಕೀರಪ್ಪ, ಅಂಜಿನಪ್ಪ, ಗ್ರಾಪಂ ಕಾರ್ಯದಶರ್ಿ ನೀರಳ್ಳಿ ಮಂಜುನಾಥ, ಮುಖ್ಯ ಶಿಕ್ಷಕ ಪದ್ಮನಾಭ ಕ್ಪರಣಂ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 