ಹೂವಿನಹಡಗಲಿ: ಮಠಗಳಿಂದ ಸಮಾಜಕ್ಕೆ ಸಂಸ್ಕೃತಿ ಸಂಸ್ಕಾರ: ಡಾ.ಹಿರಿಶಾಂತವೀರ ಸ್ವಾಮೀಜಿ ಹೇಳಿದರು.
ಲೋಕದರ್ಶನ ವರದಿ
ಹೂವಿನಹಡಗಲಿ 22: ಸಮಾಜಕ್ಕೆ ಉತ್ತಮ ಸಂಸ್ಕಾರ, ಸಂಸ್ಕೃತಿ ನೀಡುತ್ತಾ ಬಂದಿರುವುದು ಮಠಗಳ ಕಾರ್ಯ ಎಂದು ಹೂವಿನಹಡಗಲಿ ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ ಹೇಳಿದರು.
ತಾಲೂಕಿನ ಅಂಗೂರು ಗ್ರಾಮದಲ್ಲಿ ಆಯೋಜಿಸಿದ್ದ ಧರ್ಮಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾದಿದರು. ಶ್ರೀಮಠಕ್ಕೆ ಆಗಮಿಸಿದ ಭಕ್ತರಿಗೆ ಹಿರೇಮಠವು ಧರ್ಮ ಸಂಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು. ಶರಣರ ಕಾಯಕ ನಿಷ್ಟೆ ಮತ್ತು ದಾಸೋಹ ಪರಂಪರೆಯನ್ನು ಶ್ರೀಗಳು ಅಳವದಿಸಿಕೊಂದು ಸನ್ಮಾರ್ಗ ತೋರುತ್ತಿದ್ದಾರೆ ಎಂದರು.
ಅಂಗೂರೇಶ್ವರ ಸ್ವಾಮೀಜಿ ಸಾನಿಧ್ಯವಹಿಸಿದ್ದರು. ಇದೇ ಸಂದರ್ಭದಲ್ಲಿ ಕೋಟಿಹಾಳ ಗ್ರಾಮದ ಮಹಾದೇವಕ್ಕ ಅಮೃತಗೌದೆಉ ದೊಡ್ಮನಿ ಹಿರೇಮಠ ಹಾಗೂ ಹಿರೇಬನ್ನಿಮಟ್ಟಿ ಗ್ರಾಮದ ಸವಿತಾ ಗುರುಪಾದಗೌಡ ಲಿಂಗನಗೌಡ್ರು ಶ್ರೀಮಠದ ಅಂಗೂರೇಶ್ವರ ಪೂಜ್ಯರಿಗೆ ನಾಣ್ಯಗಳ ತುಲಾಭಾರ ಸೇವೆ ಅರ್ಪಿಸಿದರು
ಉಪನ್ಯಾಸಕ ಹೆಚ್.ಎಂ.ಗುರುಬಸವರಾಜಯ್ಯ ಉಪನ್ಯಾಸ ನೀಡಿದರು. ಆನೆಕಲ್ಲಿನ ಪಂಡಿತ ಪ್ರಕಾಶ ಶಾಸ್ರಿಗಳು ಜಗದ್ಗುರು ವೀರಗಂಗಾಧರ ಶಿವಾಚಾರ್ಯರರ ಪುರಾಣ ಪ್ರವಚನ ನಡೆಸಿಕೊಟ್ಟರು. ಜಿ.ನಾಗಲಾಪುರದ ಬಿ.ಎಂ.ವಿರೂಪಾಕ್ಷಯ್ಯ, ಹ.ಬೊ.ಹಳ್ಳಿಯ ವಿರೂಪಾಕ್ಷಾಚಾರ್ಯ ಸಂಗೀತ ಸೇವೆ ಸಲ್ಲಿಸಿದರು.
ಮಾಗಡಿ ಪ್ರಾಶಂತ ಸ್ವಾಗತಿಸಿದರು. ಕುಮಾರಯ್ಯ ಕಾಶೀನಾಥಯ್ಯ ಚನ್ನಬಸಯ್ಯ ಶಾಸ್ತ್ರಿಗಳು ವೇದಘೋಷ ನದೆಸಿಕೊಟ್ಟರು.
ಬಣಕಾರ ಬಸವರಾಜ ನಿರ್ವಹಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 