ಹೂವಿನಹಡಗಲಿ: ಕಿತ್ತು ಹೋದ ಡಾಂಬರ್ ರಸ್ತೆ ಪರಿಶೀಲನೆ
ಲೋಕದರ್ಶನ ವರದಿ
ಹೂವಿನಹಡಗಲಿ 17: ತಾಲೂಕಿನ ನಂದಿಹಳ್ಳಿ ಗ್ರಾಮದ ಸಂಪರ್ಕ ರಸ್ತೆ ನಿರ್ಮಿಸಿ ಇನ್ನೂ 90ದಿನಗಳು ಕಳೆದಿಲ್ಲ.ರಸ್ತೆ ಸಂಪೂರ್ಣ ಕಿತ್ತು ಹೋಗಿದೆ.ಡಾಂಬರು ಪದರು ಕಿತ್ತು ಜಲ್ಲಿ ಕಲ್ಲುಗಳು ಎದ್ದಿರುವುದರಿಂದ ವಾಹನಗಳ ಓಡಾಟಕ್ಕೆ ಆಡಚಣೆ ಉಂಟಾಗಿದ್ದರಿಂದ ಮತ್ತೆ ಇದೀಗ ಪುನ: ಕಾಮಗಾರಿ ಪ್ರಾರಂಭಿಸಲಾಗಿದ್ದು ಭಾನುವಾರ ಶಾಸಕ ಪಿ.ಟಿ.ಪರಮೇಶ್ವರನಾಯಕ ರಸ್ತೆ ಕಾಮಗಾರಿ, ಪುರಾತನ ಕಾಲದ ಬಾವಿಯ ದುರಸ್ತೆ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.
ಸೋಗಿ ಮುಖ್ಯ ರಸ್ತೆಯಿಂದ ನಂದಿಹಳ್ಳಿ ಗ್ರಾಮಕ್ಕೆ ಕಲ್ಪಿಸುವ 2.20 ಕಿ.ಮೀ.ಕೂಡು ರಸ್ತೆಗೆ 1.02 ಕೋಟಿ ಖಚರ್ು ಮಾಡಲಾಗಿದೆ ಇದೀಗ ಸಂಪೂರ್ಣ ಡಾಂಬರು ರಸ್ತೆ ಕಿತ್ತು ಹೋಗಿ ಗುಂಡಿಗಳು ಬಿದ್ದಿವೆ.ಕಳೆದ ವರ್ಷ ದುರಸ್ತಿ ಕೈಗೊಳ್ಳಲಾಗಿತ್ತು. ಕಾಮಗಾರಿ ಕಳಪೆಯಿಂದ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು ಬಂಡಿ,ದ್ವಿಚಕ್ರ ವಾಹನಗಳು ಓಡಾಟಕ್ಕೆ ತೀವ್ರತೊಂದರೆಯಾಗಿದ್ದರಿಂದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ರಸ್ತೆ ಅಭಿವೃದ್ದಿ ಸಂಸ್ಥೆ ಇದೀಗ ಡಾಂಬರ್ ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ.
ಈ ಸಂದರ್ಭದಲ್ಲಿ ತಹಶೀಲ್ದಾರ ಕೆ.ರಾಘವೇಂದ್ರರಾವ್, ತಾ.ಪಂ.ಮಾಜಿ ಅಧ್ಯಕ್ಷ ಸೋಗಿ ಹಾಲೇಶ, ಗ್ರಾ.ಪಂ.ಅಧ್ಯಕ್ಷ ಕಂಠಿ ವೀರೇಶ, ಗ್ರಾಮದ ಮುಖಂಡರಾದ ಕಂಠಿ ಕಂಠೆಪ್ಪ, ಅರುಣಿ ಬಸವರಾಜ, ಅಂಗಡಿ ಬಸವರಾಜ, ಕಾಂಗ್ರೆಸ್ ವಕ್ತಾರ ಬಿ.ಎಲ್.ಶ್ರೀಧರ, ಶಿಕ್ಷಕ ವಿ.ಬಿ.ಜಗದೀಶ, ಈಶಪ್ಪ,
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 