ಹೂವಿನಹಡಗಲಿ: ಸಿಡಿಲು ಬಡಿದು ಯುವಕ ಸಾವು ಮೃತ ಕುಟುಂಬಕ್ಕೆ 5ಲಕ್ಷ ಪರಿಹಾರ
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲೂಕಿನ ಹುಗಲೂರು ಗ್ರಾಮದ ಮುಸ್ಲಿಂ ಜನಾಂಗದ ಯುವಕ ಮಹ್ಮದ್ ರಫಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಈಚೆಗೆ ಸಾವನ್ನಪ್ಪಿದ್ದರಿಂದ ಮೃತ ಕುಟುಂಬಕ್ಕೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ, ತಹಶೀಲ್ದಾರ ಕೆ.ರಾಘವೇಂದ್ರರಾವ್ ಭಾನುವಾರ 5ಲಕ್ಷ ರೂ.ಪರಿಹಾರದ ಚಕ್ನ್ನು ವಿತರಿಸಿದರು.
ಕೃಷಿ ಕೂಲಿ ಕಾರ್ಮಿಕ ಮೃತ ಮಹ್ಮದ್ ರಫಿ(24) ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದರಿಂದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕೃತಿ ವಿಕೋಪ ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ ನೆರವನ್ನು ಶಾಸಕರು ನೀಡಿದರು.
ನಂದಿಹಳ್ಳಿ ರಥ ನಿರ್ಮಾಣಕ್ಕೆ 5ಲಕ್ಷ ರೂ: ತಾಲೂಕಿನ ನಂದಿಹಳ್ಳಿ ಗ್ರಾಮದ ಕಂಠಿ ಬಸವೇಶ್ವರ ಸ್ವಾಮಿಯ ನೂತನ ರಥ ನಿರ್ಮಾಣಕ್ಕೆ 5ಲಕ್ಷ ರೂ. ನೆರವು ನೀಡುವುದಾಗಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದ ಅವರು ದುರಗಮ್ಮನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ 2.50ಲಕ್ಷ ರೂ.ಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಸೋಗಿಹಾಲೇಶ,ವಕ್ತಾರ ಬಿ.ಎಲ್.ಶ್ರೀಧರ, ನಂದಿಹಳ್ಳಿ ಗ್ರಾ.ಪಂ.ಅಧ್ಯಕ್ಷ ಕಂಠಿ ವೀರೇಶ, ಗ್ರಾಮಸ್ಥರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 