ಹೂವಿನಹಡಗಲಿ: ಸಿಡಿಲು ಬಡಿದು ಯುವಕ ಸಾವು ಮೃತ ಕುಟುಂಬಕ್ಕೆ 5ಲಕ್ಷ ಪರಿಹಾರ
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲೂಕಿನ ಹುಗಲೂರು ಗ್ರಾಮದ ಮುಸ್ಲಿಂ ಜನಾಂಗದ ಯುವಕ ಮಹ್ಮದ್ ರಫಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಈಚೆಗೆ ಸಾವನ್ನಪ್ಪಿದ್ದರಿಂದ ಮೃತ ಕುಟುಂಬಕ್ಕೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ, ತಹಶೀಲ್ದಾರ ಕೆ.ರಾಘವೇಂದ್ರರಾವ್ ಭಾನುವಾರ 5ಲಕ್ಷ ರೂ.ಪರಿಹಾರದ ಚಕ್ನ್ನು ವಿತರಿಸಿದರು.
ಕೃಷಿ ಕೂಲಿ ಕಾರ್ಮಿಕ ಮೃತ ಮಹ್ಮದ್ ರಫಿ(24) ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದರಿಂದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕೃತಿ ವಿಕೋಪ ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ ನೆರವನ್ನು ಶಾಸಕರು ನೀಡಿದರು.
ನಂದಿಹಳ್ಳಿ ರಥ ನಿರ್ಮಾಣಕ್ಕೆ 5ಲಕ್ಷ ರೂ: ತಾಲೂಕಿನ ನಂದಿಹಳ್ಳಿ ಗ್ರಾಮದ ಕಂಠಿ ಬಸವೇಶ್ವರ ಸ್ವಾಮಿಯ ನೂತನ ರಥ ನಿರ್ಮಾಣಕ್ಕೆ 5ಲಕ್ಷ ರೂ. ನೆರವು ನೀಡುವುದಾಗಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದ ಅವರು ದುರಗಮ್ಮನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ 2.50ಲಕ್ಷ ರೂ.ಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಸೋಗಿಹಾಲೇಶ,ವಕ್ತಾರ ಬಿ.ಎಲ್.ಶ್ರೀಧರ, ನಂದಿಹಳ್ಳಿ ಗ್ರಾ.ಪಂ.ಅಧ್ಯಕ್ಷ ಕಂಠಿ ವೀರೇಶ, ಗ್ರಾಮಸ್ಥರು ಇದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 