ಹೂವಿನಹಡಗಲಿ: ವಿದ್ಯುತ್ ತಂತಿ ಹರಿದು ನಾಲ್ಕು ಆಕಳು ಸಾವು
ಲೋಕದರ್ಶನ ವರದಿ
ಹೂವಿನಹಡಗಲಿ 25: ವಿದ್ಯುತ್ ತಂತಿ ತುಂಡಾಗಿ ಬಿದ್ದು ನಾಗತಿಬಸಾಪುರ ಗ್ರಾಮದಲ್ಲಿ ಬುಧವಾರ ರಾತ್ರಿ ನಾಲ್ಕು ಆಕಳು ಸತ್ತಿವೆ. ರೈತ ಶಿವಣ್ಣನವರ ಪ್ರಕಾಶ್ ಎಂಬುವವರಿಗೆ ಸೇರಿದ್ದಾಗಿವೆ. ಮನೆ ಮುಂದೆ ಹಾದು ಹೋದ ವಿದ್ಯುತ್ ತಂತಿ ಹರಿದು ಆಕಳುಗಳನ್ನು ಕಟ್ಟಿದ್ದ ಶೆಡ್ನ ತಗಡಿನ ಮೇಲೆ ಬಿದ್ದಿದೆ. ತಗಡುಗಳು ಆಕಳುಗಳ ಮೇಲೆ ಬಿದ್ದಿದ್ದು, ವಿದ್ಯುತ್ ಸ್ಪಶರ್ಿಸಿ ಬೆಂಕಿ ಹೊತ್ತ್ತಿಕೊಂಡಿದೆ.
ತರಾಟೆ:
ವಿದ್ಯುತ್ ತಂತಿ ರಾತ್ರಿ ಸಮಯದಲ್ಲಿ ತುಂಡಾಗಿ ಬಿದ್ದು ಬೆಂಕಿ ಕಾಣಿಸಿಕೊಂಡ ಸಮಯ ಹಲವು ಬಾರಿ ದೂರವಾಣಿ ಮೂಲಕ ಜೆಸ್ಕಾಂ ಅಧಿಕಾರಿಗಳ ಸಂಪಕರ್ಿಸಿದರೂ ಸ್ಪಂದಿಸಲಿಲ್ಲ ಎಂದು ಗ್ರಾಮಸ್ಥರು ಗುರುವಾರ ಸ್ಥಳಕ್ಕೆ ಭೇಟಿ ನೀಡಿದ್ದ ಜೆಸ್ಕಾಂ ಎಇಇ ಮೋಟ್ಲಾನಾಯ್ಕರನ್ನು ತರಾಟೆ ತೆಗೆದುಕೊಂಡರು. ಸ್ಥಳಕ್ಕೆ ತಹಸೀಲ್ದಾರ್ ಕೆ.ರಾಘವೇಂದ್ರರಾವ್ ಭೇಟಿ ನೀಡಿ ಪರಿಶೀಲಿಸಿದರು. ರೈತರಿಗೆ ನಷ್ಟ ಪರಿಹಾರ ಕೊಡಿಸಲಾಗುವುದು. ಗ್ರಾಮದಲ್ಲಿ ದುಸ್ಥಿತಿಯಲ್ಲಿರುವ ವಿದ್ಯುತ್ ಕಂಬ, ವೈರ್ಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 