ಹೂವಿನಹಡಗಲಿ: ಪ್ರಶ್ನೆ ಪತ್ರಿಕೆ ಕಾರ್ಯಾಗಾರ
ಲೋಕದರ್ಶನ ವರದಿ
ಹೂವಿನಹಡಗಲಿ 22: ಮಾತೃಭಾಷೆಯ ಕನ್ನಡ ವಿಷಯದಲ್ಲಿ 10ನೇ ತರಗತಿಯಲ್ಲಿ ಅನುತ್ತೀರ್ಣರಾಗದಂತೆ ಕನ್ನಡ ವಿಷಯ ಶಿಕ್ಷಕರು ಎಚ್ಚರವಹಿಸಬೇಕು ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಪಿ.ಪ್ರಕಾಶ್ ಹೇಳಿದರು.
ಪಟ್ಟಣದ ವಿದ್ಯಾಂಜಲಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಕನ್ನಡ ಪ್ರಶ್ನೆ ಪತ್ರಿಕೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಕಳೆದ ಶೈಕ್ಷಣಿಕ ಸಾಲಿನಲ್ಲಿ ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗಿದ್ದಾರೆ ಶಿಕ್ಷಕರು ಕನ್ನಡದ ವ್ಯಾಕರಣ, ಪ್ರಬಂಧ, ಪತ್ರಬರಹ ಬಗ್ಗೆ ಪರಿಣಾಮಕಾರಿ ಬೋಧನಾ ಶೈಲಿಯನ್ನು ಅಳವಡಿಸಿಕೊಂಡು ಗುಣಾತ್ಮಕ ಫಲಿತಾಂಶಕ್ಕೆ ಸಹಕರಿಸಬೇಕು ಎಂದರು.
ವಿವೇಕಾನಂದ ವಿದ್ಯಾ ಸಂಸ್ಥೆ ಎಂ.ಎಂ.ಗುರುಬಸವರಾಜ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಇಂತಹ ಕಾರ್ಯಾಗಾರ ಅಗತ್ಯ ಎಂದರು. ಬಸಯ್ಯ ನೆರೆಗಲ್ ಅವರು ಕನ್ನಡ ಮತ್ತು ಗಣಿತ ವಿಷಯ ಬಗ್ಗೆ ಶಿಕ್ಷಕರಿಗೆ ತರಬೇತಿ ನೀಡಿದರು. ಆನಂದ ರೆಡ್ಡಿ, ಹುಸೇನ್ ಪೀರ್, ಬಿ.ಬಸವರಾಜ, ಮಂಜುನಾಥ, ಭೀಮಪ್ಪ ಇದ್ದರು. ತಾಲೂಕಿನ ನಾನಾ ಪ್ರೌಢಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 