ಮೀ ಟೂ ಅಭಿಯಾನಕ್ಕೆ ನನ್ನ ಬೆಂಬಲವಿಲ್ಲ: ಬಿ.ಟಿ. ಲಲಿತಾನಾಯಕ್
ಬೆಂಗಳೂರು, ನ.18-ಮೀ ಟೂ ಅಭಿಯಾನಕ್ಕೆ ನನ್ನ ಬೆಂಬಲವಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ತಿಳಿಸಿದರು.
ನಗರದ ಪುರಭವನದ ಎದುರು ಕುಮಾರ್ ಜಾಗೀರ್ದಾರ್ ಅಧ್ಯಕ್ಷತೆಯಲ್ಲಿ ಕ್ರಿಸ್ಪ್ ಸಂಸ್ಥೆ ಹಾಗೂ ಕನರ್ಾಟಕ ರಾಜ್ಯ ವಿಶ್ವಕರ್ಮ ಯುವಜನ ಪರಿಷತ್ ಮತ್ತು ರಾಷ್ಟ್ರೀಯ ಪುರುಷರ ಆಯೋಗ ಜನಾಂದೋಲನ ಸಹಯೋಗದಲ್ಲಿ ಕನರ್ಾಟಕ-ಭಾರತ ಕಾಲ್ನಡಿಗೆ ವಿಜಯೋತ್ಸವ ಹಾಗೂ ಅಂತಾರಾಷ್ಟ್ರೀಯ ಪುರುಷರ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇತ್ತೀಚೆಗೆ ಭಾರೀ ಸುದ್ದಿ ಮಾಡಿರುವ ಮೀ ಟೂ ಅಭಿಯಾನದಲ್ಲಿ ಯಾವುದೇ ಸತ್ಯ ಹೊರಬರುತ್ತಿಲ್ಲ. ಕೇವಲ ಆರೋಪ-ಪ್ರತ್ಯಾರೋಪದಲ್ಲೇ ಮುಂದುವರಿದಿದೆ. ಇದರ ಬಗ್ಗೆ ಸುಪ್ರೀಂಕೋಟರ್್ ಸಹ ಸರಿಯಾಗಿ ತೀಪರ್ು ನೀಡಿಲ್ಲ. ಆದ್ದರಿಂದ ಇದಕ್ಕೆ ನನ್ನ ಬೆಂಬಲವಿಲ್ಲ ಎಂದು ಹೇಳಿದರು.
ಇತ್ತೀಚೆಗೆ ಮಹಿಳೆಯರ ಮೇಲೆ ದೌರ್ಜನ್ಯ ಎಂಬುದು ಸಹಜ ಪ್ರಕ್ರಿಯೆ. ಪುರುಷರ ಮೇಲೂ ದೌರ್ಜನ್ಯ ನಡೆಯುತ್ತಿದೆ. ಇದಕ್ಕೆ ಮಹಿಳೆಯರೂ ಕಾರಣವಾಗಿದ್ದಾರೆ ಎಂದರು.
ಕೋಟರ್್ ತೀಪರ್ು ನೀಡುವಾಗ ಮಹಿಳೆಯರದ್ದು ತಪ್ಪಿದೆಯಾ, ಪುರುಷರ ತಪ್ಪಿರುತ್ತದೋ ಎಂಬುದನ್ನು ತಿಳಿಯದೆ ಮಹಿಳೆಯರ ಪರವಾಗಿ ತೀಪರ್ು ನೀಡುತ್ತದೆ, ಇದು ಸರಿಯಲ್ಲ. ತೀಪರ್ಿನಿಂದ ಪುರುಷನ ಜತೆಗೆ ಅವರ ತಂದೆ-ತಾಯಿ, ಅಕ್ಕ-ತಂಗಿಯರೂ ದೌರ್ಜನ್ಯಕ್ಕೆ ಒಳಗಾಗುವಂತಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.
ಸ್ವಾರ್ಥಕ್ಕಾಗಿ ಪುರುಷನ ಮೇಲೆ ದೌರ್ಜನ್ಯ ಸಲ್ಲದು. ಇಬ್ಬರಲ್ಲೂ ಸಮಾನತೆ ಕಾಯ್ದುಕೊಳ್ಳುವುದು ಬಹಳ ಮುಖ್ಯ ಎಂದು ಬಿ.ಟಿ.ಲಲಿತಾನಾಯಕ್ ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 