ಫ್ಲೆಕ್ಸ್, ಬ್ಯಾನರ್ ತೆರವು
ಲೋಕದರ್ಶನವರದಿ
ಬ್ಯಾಡಗಿ13:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಕಾರಣ ಸ್ಥಳೀಯ ತಾಲೂಕಾಡಳಿತ ಪುರಸಭೆ ಸಿಬ್ಬಂದಿ ನೆರವಿನೊಂದಿಗೆ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್ಸ್ಗಳನ್ನು ತೆರವುಗೊಳಿಸಲು ಮುಂದಾಯಿತು.
ಬರುವ ಏ.23 ರಂದು ನಡೆಯುವ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ, ಫ್ಲೆಕ್ಸ್ ತೆರವು ಕಾರ್ಯಾಚರಣೆಗೆ ಮುಂದಾದ ತಾಲೂಕಾಡಳಿತ ಸಕರ್ಾರದ ವಿವಿಧ ಯೋಜನೆಗಳು, ರಾಜಕೀಯ ವ್ಯಕ್ತಿಗಳ ಭಾವಚಿತ್ರವಿರುವ ಫ್ಲೆಕ್ಸ್ ಸೇರಿದಂತೆ ಕಟೌಟ್ಸ್ಗಳನ್ನು ತೆರವುಗೊಳಿಸಿದರು.
ಎಲ್ಲೆಲ್ಲಿ ತೆರವು: ಎಪಿಎಂಸಿ ತಹಶೀಲ್ದಾರ ಕಛೇರಿ ಸೇರಿದಂತೆ ಬಹುತೇಕ ಎಲ್ಲ ಸಕರ್ಾರಿ ಕಛೇರಿಗಳು ಮುಂಭಾಗದಲ್ಲಿಯೂ ಸಕರ್ಾರದ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಎಲ್ಲ ಬ್ಯಾನರ್ಗಳನ್ನು ಪುರಸಭೆ ಸಿಬ್ಬಂದಿಗಳು ತೆರವುಗೊಳಿಸಿದರು. ಪಟ್ಟಣದ ಹಾಗೂ ಸುಭಾಸ ಸರ್ಕಲ್, ಹಳೇಪುರಸಭೆ ಇನ್ನಿತರ ಕಡೆಗಳಲ್ಲಿ ಅನುಮತಿ ಮೇರೆಗೆ ಹಾಕಲಾಗಿದ್ದ ಬೋರ್ಡಗಳನ್ನು ತೆರವುಗೊಳಿಸಲಾಯಿತು.
ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನಾದ್ಯಂತ ಪಕ್ಷದ ಮುಖಂಡರು ಪಕ್ಷ ಸಂಘಟನೆಯ ಉದ್ದೇಶದಿಂದ ಹಾಕಲಾಗಿದ್ದ ಫ್ಲೆಕ್ಸ್ ಬ್ಯಾನರ್ಗಳನ್ನೂ ಸಹ ತೆರವುಗೊಳಿ ಸಲಾಯಿತು, ತಾಲ್ಲೂಕ ಪಂಚಾಯತ್ ಬಳಿಯಿದ್ದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಇವರ ಜನಸಂಪರ್ಕ ಕಾರ್ಯಾಲಯದ ನಾಮಫಲಕವನ್ನೂ ಸಹ ಮುಚ್ಚಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 