ಫ್ಲೆಕ್ಸ್, ಬ್ಯಾನರ್ ತೆರವು
ಲೋಕದರ್ಶನವರದಿ
ಬ್ಯಾಡಗಿ13:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಕಾರಣ ಸ್ಥಳೀಯ ತಾಲೂಕಾಡಳಿತ ಪುರಸಭೆ ಸಿಬ್ಬಂದಿ ನೆರವಿನೊಂದಿಗೆ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್ಸ್ಗಳನ್ನು ತೆರವುಗೊಳಿಸಲು ಮುಂದಾಯಿತು.
ಬರುವ ಏ.23 ರಂದು ನಡೆಯುವ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ, ಫ್ಲೆಕ್ಸ್ ತೆರವು ಕಾರ್ಯಾಚರಣೆಗೆ ಮುಂದಾದ ತಾಲೂಕಾಡಳಿತ ಸಕರ್ಾರದ ವಿವಿಧ ಯೋಜನೆಗಳು, ರಾಜಕೀಯ ವ್ಯಕ್ತಿಗಳ ಭಾವಚಿತ್ರವಿರುವ ಫ್ಲೆಕ್ಸ್ ಸೇರಿದಂತೆ ಕಟೌಟ್ಸ್ಗಳನ್ನು ತೆರವುಗೊಳಿಸಿದರು.
ಎಲ್ಲೆಲ್ಲಿ ತೆರವು: ಎಪಿಎಂಸಿ ತಹಶೀಲ್ದಾರ ಕಛೇರಿ ಸೇರಿದಂತೆ ಬಹುತೇಕ ಎಲ್ಲ ಸಕರ್ಾರಿ ಕಛೇರಿಗಳು ಮುಂಭಾಗದಲ್ಲಿಯೂ ಸಕರ್ಾರದ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಎಲ್ಲ ಬ್ಯಾನರ್ಗಳನ್ನು ಪುರಸಭೆ ಸಿಬ್ಬಂದಿಗಳು ತೆರವುಗೊಳಿಸಿದರು. ಪಟ್ಟಣದ ಹಾಗೂ ಸುಭಾಸ ಸರ್ಕಲ್, ಹಳೇಪುರಸಭೆ ಇನ್ನಿತರ ಕಡೆಗಳಲ್ಲಿ ಅನುಮತಿ ಮೇರೆಗೆ ಹಾಕಲಾಗಿದ್ದ ಬೋರ್ಡಗಳನ್ನು ತೆರವುಗೊಳಿಸಲಾಯಿತು.
ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನಾದ್ಯಂತ ಪಕ್ಷದ ಮುಖಂಡರು ಪಕ್ಷ ಸಂಘಟನೆಯ ಉದ್ದೇಶದಿಂದ ಹಾಕಲಾಗಿದ್ದ ಫ್ಲೆಕ್ಸ್ ಬ್ಯಾನರ್ಗಳನ್ನೂ ಸಹ ತೆರವುಗೊಳಿ ಸಲಾಯಿತು, ತಾಲ್ಲೂಕ ಪಂಚಾಯತ್ ಬಳಿಯಿದ್ದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಇವರ ಜನಸಂಪರ್ಕ ಕಾರ್ಯಾಲಯದ ನಾಮಫಲಕವನ್ನೂ ಸಹ ಮುಚ್ಚಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 