ಪ್ರಜಾಪ್ರಭುತ್ವದ ಉಳಿವಿಗೆ ಎಲ್ಲರೂ ಮತಚಲಾಯಿಸಿ: ಪದ್ಮಶ್ರೀ ಸುತಾರ
ಧಾರವಾಡ14: ಭಾರತೀಯರಾದ ನಾವೆಲ್ಲ ಬರುವ ಏ. 23 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಗಳಲ್ಲಿ ಯಾವುದೇ ಪ್ರಭಾವ,ಪ್ರಲೋಭನೆಗೆ ಒಳಗಾಗದೇ ಸ್ವತಂತ್ರವಾಗಿ ಮತಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯಬೇಕು ಎಂದು ಕನ್ನಡದ ಕಬೀರ,ಭಾವೈಕ್ಯತೆಯ ಹರಿಕಾರ ಎಂದೇ ಹೆಸರಾಗಿರುವ ಪದ್ಮಶ್ರೀ ಇಬ್ರಾಹಿಂ ಸುತಾರ ಕರೆ ನೀಡಿದರು.
ಕೆಲಗೇರಿ ರಸ್ತೆಯ ಸಾಯಿನಗರದ ಶಿರಡಿ ಸಾಯಿಬಾಬಾ ಸಂಸ್ಥೆಯಲ್ಲಿ ರಾಮನವಮಿ ಅಂಗವಾಗಿ ಏರ್ಪಡಿಸಿದ್ದ ವಿಶೇಷ ಆಧ್ಯಾತ್ಮಿಕ ಪ್ರವಚನ ನೀಡಿದ ಅವರು ,ಬಳಿಕ ಬರುವ ಏ. 23 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಗಳಲ್ಲಿ ಎಲ್ಲರೂ ಮತ ಚಲಾಯಿಸಿ ಉತ್ತಮ ಮತದಾನ ಪ್ರಮಾಣ ದಾಖಲಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ,ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಬಿ.ಸಿ.ಸತೀಶ, ಶಿರಡಿ ಸಾಯಿಬಾಬಾ ಸಂಸ್ಥೆಯ ಅಧ್ಯಕ್ಷ ಮಹೇಶ ಎಂ.ಶೆಟ್ಟಿ,ಪದಾಧಿಕಾರಗಳಾದ ಉದಯಕುಮಾರ ಶೆಟ್ಟಿ,ವಿಪಿನಾನಂದ ಶೆಟ್ಟಿ ಮತ್ತಿತರರು ಇದ್ದರು.ಎಫ್.ಬಿ.ಕಣವಿ ಮತ್ತು ತಂಡದವರು ಚುನಾವಣಾ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 