ಸಾರ್ವತ್ರಿಕ ಚುನಾವಣೆಗಳು-2019 ಜಿಲ್ಲಾ ಮಟ್ಟದ ಮಾಧ್ಯಮ ಸಮಿತಿ ರಚನೆ
ಧಾರವಾಡ 04: ರಾಜ್ಯ ಚುನಾವಣಾ ಆಯೋಗದ ನಿದರ್ೆಶನದಂತೆ ನಗರ ಸ್ಥಳೀಯ ಸಾರ್ವತ್ರಿಕ ಚುನಾವಣೆಗಳು 2019 ನೇದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ಧಾರವಾಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಪುರಸಭೆ, ನವಲಗುಂದ ಪಟ್ಟಣ ಪಂಚಾಯತ್, ಅಳ್ನಾವರ, ಕಲಘಟಗಿ ಕಾರ್ಯವ್ಯಾಪ್ತಿಗಳಿಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಮಾಧ್ಯಮ ಸಮಿತಿಯನ್ನು ರಚಿಸಲಾಗಿದೆ.
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ನವಲಗುಂದ, ಧಾರವಾಡ ಹಾಗೂ ಕಲಘಟಗಿ ತಹಶೀಲ್ದಾರರುಗಳನ್ನು ಸದಸ್ಯರನ್ನಾಗಿ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೆಶಕರನ್ನು ಸದಸ್ಯ ಕಾರ್ಯದಶರ್ಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಜಿಲ್ಲಾ ಮಟ್ಟದ ಮಾಧ್ಯಮ ಸಮಿತಿಯು ಪ್ರಚಲಿತದಲ್ಲಿರುವ ನಿಯಮಗಳಂತೆ ಹಾಗೂ ರಾಜ್ಯ ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ವಯ ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆಯಾಗುವಂತೆ ನೋಡಿಕೊಳ್ಳತಕ್ಕದ್ದು.
ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಕಾಲಕಾಲಕ್ಕೆ ಮಾಹಿತಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 