ವಿಶ್ವ ಬಂಧುತ್ವ ಸಾರಿದ ರೇಣುಕಾಚಾರ್ಯರ ಸಂದೇಶ ದಾರಿದೀಪ: ರಂಭಾಪುರಿ ಶ್ರೀ
ಹುಬ್ಬಳ್ಳಿ 11: ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವೀರಶೈವ ಧರ್ಮ ಸಂಸ್ಥಾಪನಾಚಾರ್ಯರಾದ ಜಗದ್ಗುರು ರೇಣುಕಾಚಾರ್ಯರ ವಿಶ್ವಬಂಧುತ್ವ ಸಾರಿದ ಸಂದೇಶ ಸರ್ವರಿಗೂ ದಾರಿದೀಪ ಎಂದು ಅವರು ತಾಲೂಕಿನ ರಂಭಾಪುರಿ ಜಗದ್ಗುರುಗಳವರ ಜನ್ಮ ಭೂಮಿ ಹಳ್ಳಿಯಾಳ ಗ್ರಾಮದಲ್ಲಿ ಜರುಗಿದ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಧರ್ಮ ಸಮಾರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಸುಖ ಸಮೃದ್ಧಿ ಬದುಕಿಗೆ ಧರ್ಮ ಪರಿಪಾಲನೆ ಮುಖ್ಯ. ಅರಿವು ಮತ್ತು ಆಚಾರಗಳ ಮೂಲಕ ಮಾನವನ ಬದುಕು ಶ್ರೀಮಂತಗೊಳ್ಳಬೇಕಾಗಿದೆ. ವೀರಶೈವ ಧರ್ಮದಲ್ಲಿ ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆಗೆ ವಿಶೇಷ ಮಹತ್ವ ಕೊಟ್ಟಿದ್ದಾರೆ. ಕಾಯಕ ಮತ್ತು ದಾಸೋಹದ ಮೂಲಕ ಬದುಕಿನಲ್ಲಿ ಶ್ರೇಯಸ್ಸನ್ನು ಕಾಣಲು ಸಾಧ್ಯವೆಂದು ಜಗದ್ಗುರು ರೇಣುಕಾಚಾರ್ಯರು ಸಾರಿದ್ದಾರೆ. ಹಳ್ಳಿಯಾಳ ಗ್ರಾಮದ ಸಕಲ ಸದ್ಭಕ್ತರು ಸೇರಿ ಜಗದ್ಗುರು ರೇಣುಕಾಚಾರ್ಯರ ನೂತನ ರಥ ನಿಮರ್ಿಸಿ ಜಾತ್ರೆ ನೆರವೇರಿಸುತ್ತಿರುವುದು ಸಂತೋಷದ ಸಂಗತಿ ಎಂದರು.
ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾಯರ್ಯ ಸ್ವಾಮಿಗಳು ಮಾತನಾಡಿ ಮಾನವ ಜೀವನದಲ್ಲಿ ಒಂದು ಗುರಿ ಬೇಕು. ಆ ಗುರಿ ತಲುಪಿಸಲು ಗುರುವಿನ ಅವಶ್ಯಕತೆಯಿದೆ ಎಂದರು.
ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕ ಗದಿಗೆಯ್ಯ ಹಿರೇಮಠರಿಂದ ವೇದಘೋಷ, ಗಂಗಾಧರಸ್ವಾಮಿ ಅವರಿಂದ ಭಕ್ತಿ ಗೀತೆ ಜರುಗಿತು. ಬಿ.ಡಿ. ನಾಗನಗೌಡರ ಸ್ವಾಗತಿಸಿದರು. ಗುರುನಾಥಗೌಡ ಮಾದಾಪುರ ನಿರೂಪಿಸಿದರು.
ಬೆಳಿಗ್ಗೆ ಲಿಂಗೋದ್ಭವ ಜಗದ್ಗುರು ರೇಣುಕಾಚಾರ್ಯ ಮಂಗಲ ಮೂತರ್ಿಗೆ ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಲ ನೆರವೇರಿದವು. ಸಂಜೆ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 