ಇಂದು ಸರಿಗಮ ಖ್ಯಾತಿಯ ಹನುಮಂತನಿಂದ ಮತಗಾನ ಕಾರ್ಯಕ್ರಮ
ಹಾವೇರಿ17: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾರರ ಜಾಗೃತಿಗಾಗಿ ಇಂದು ಸಂಜೆ 6 ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣ(ಮುನ್ಸಿಪಲ್ ಹೈಸ್ಕೂಲ್ ಮೈದಾನ) ಆವರಣದಲ್ಲಿ ಸರಿಗಮ ಖ್ಯಾತಿಯ ಹಾಡುಗಾರ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಹನುಮಂತಪ್ಪ ಲಮಾಣಿ ಅವರಿಂದ ಮತದಾನ ಜಾಗೃತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಲಾದ ಮತಗಾನ ಕಾರ್ಯಕ್ರಮದಲ್ಲಿ ಗಾಯಕ ಹನುಮಂತಪ್ಪ ಲಮಾಣಿ ಅವರೊಂದಿಗೆ ವಿವಿಧ ಗಾಯಕರು ಭಾಗವಹಿಸಲಿದ್ದಾರೆ. ಮತಗಾನ ಕಾರ್ಯಕ್ರಮಕ್ಕೆ ಮುನ್ನ ಗಾಂಧಿ ವೃತ್ತದಿಂದ ಎತ್ತಿನ ಬಂಡಿಯಲ್ಲಿ ಜಿಲ್ಲಾ ಸ್ವೀಪ್ ರಾಯಭಾರಿ ಗಾಯಕ ಹನುಮಂತಪ್ಪ ಲಮಾಣಿ ಸವಾರಿ ಮಾಡಿ ಮತಜಾಗೃತಿ ಮೂಡಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸುವಂತೆ ಜಿಲ್ಲಾ ಸ್ವೀಪ್ ಸಮಿತಿ ಕೋರಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 