ಸ್ಟ್ರಾಂಗ್ ರೂಮ್ ಸಿದ್ಧತೆ ಕುರಿತಂತೆ ಕೇಂದ್ರ ವೀಕ್ಷಕರಿಂದ ಪರಿಶೀಲನೆ
ಹಾವೇರಿ14: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಪೆಟ್ಟಿಗೆಳ ಸಂಗ್ರಹ ಹಾಗೂ ಮತ ಎಣಿಕೆಗಾಗಿ ಸಿದ್ಧಪಡಿಸಿರುವ ಕೊಠಡಿಗಳನ್ನು ಕೇಂದ್ರ ಚುನಾವಣಾ ಆಯೋಗದಿಂದ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ನಿಯೋಜಿತಗೊಂಡಿರುವ ವೀಕ್ಷಕರ ತಂಡ ಪರಿಶೀಲನೆ ನಡೆಸಿತು.
ದೇವಗಿರಿಯಲ್ಲಿರುವ ಸಕರ್ಾರಿ ಇಂಜನೀಯರಿಂಗ್ ಕಾಲೇಜಿಗೆ ಭಾನುವಾರ ಭೇಟಿ ನೀಡಿದ ಕೇಂದ್ರ ಸಾಮಾನ್ಯ ವೀಕ್ಷಕರಾದ ಐ.ಎ.ಎಸ್. ಹಿರಿಯ ಅಧಿಕಾರಿ ಡಾ.ಅಖ್ತರ ರಿಯಾಜ್, ವೆಚ್ಚ ವೀಕ್ಷಕರಾದ ಐ.ಆರ್.ಎಸ್. ಅಧಿಕಾರಿ ಹಸನ್ ಅಹ್ಮದ್ ಹಾಗೂ ಪೊಲೀಸ್ ವೀಕ್ಷಕರಾದ ಹಿರಿಯ ಐ.ಪಿ.ಎಸ್. ಅಧಿಕಾರಿ ಸಿದ್ಧಾರ್ಥ ಎಂ. ನಾರವಾನೆ ಅವರು ಭೇಟಿ ನೀಡಿ ಪರಿಶೀಲಿಸಿದರು.
ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಹಾಗೂ ಗದಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳು ಒಳಗೊಂಡಿದ್ದು, ಮತದಾನದ ನಂತರ ಪ್ರತಿ ವಿಧಾನಸಭಾ ಕ್ಷೇತ್ರದ ಇವಿಎಂ., ವಿವಿಪ್ಯಾಟ್ಗಳನ್ನು ಮತ ಎಣಿಕೆ ಕೇಂದ್ರ ದೇವಗಿರಿ ಇಂಜನೀಯರಿಂಗ್ ಕಾಲೇಜಿಗೆ ತಂದು ದಾಸ್ತಾನು ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತ್ಯೇಕ ದಾಸ್ತಾನು ಕೊಠಡಿ ಹಾಗೂ ಪ್ರತ್ಯೇಕವಾಗಿ ಎಣಿಕೆ ಕೊಠಡಿಯನ್ನು ಸಿದ್ಧಪಡಿಸಲಾಗಿದೆ. ಆಯೋಗದ ಮಾರ್ಗಸೂಚಿಯಂತೆ ಗರಿಷ್ಠ ಭದ್ರತಾ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಕೊಠಡಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆಗಾಗಿ 14 ಟೆಬಲ್ಗಳನ್ನು ಅಳವಡಿಸಲಾಗುವುದು. ಎಣಿಕೆ ಸಿಬ್ಬಂದಿ ಹಾಗೂ ಅಭ್ಯಥರ್ಿಗಳ ಏಜಂಟರುಗಳಿಗೆ ಎಣಿಕೆ ಕೇಂದ್ರದ ಪ್ರವೇಶಕ್ಕೆ ಪ್ರತ್ಯೇಕವಾದ ಪ್ರವೇಶ ವ್ಯವಸ್ಥೆ ಹಾಗೂ ವಿವಿಧ ಸಿದ್ಧತೆಗಳ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಸಹಾಯಕ ಚುನಾವಣಾಧಿಕಾರಿ ಗೋವಿಂದರೆಡ್ಡಿ ವೀಕ್ಷಕರಿಗೆ ವಿವರಿಸಿದರು.
ಮತಪೆಟ್ಟಿಗೆಗಳ ದಾಸ್ತಾನು ಕೊಠಡಿಗಳಿಗೆ ಗರಿಷ್ಠ ಸುರಕ್ಷತಾ ಕ್ರಮಗಳು ಹಾಗೂ ಭದ್ರತೆಯನ್ನು ಒದಗಿಸಲು ವೀಕ್ಷಕರು ಸಲಹೆ ನೀಡಿದರು. ಮತಪೆಟ್ಟಿಗೆ ದಾಸ್ತಾನು ಕೊಠಡಿಯ ದ್ವಾರ ಹಾಗೂ ಕೊಠಡಿಗಳ ಹಿಂಬದಿಯಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ, ಬೆಳಕಿನ ವ್ಯವಸ್ಥೆ ಹಾಗೂ ಕಿಟಕಿ ಮತ್ತು ಬಾಗಿಲುಗಳನ್ನು ಭದ್ರಪಡಿಸುವುದು, ಕಟ್ಟಡದ ಸುತ್ತಲೂ ಗರಿಷ್ಠ ಪೊಲೀಸ್ ಭದ್ರತೆ ಕಲ್ಪಿಸುವ ಕುರಿತಂತೆ ಸಲಹೆ ನೀಡಿದರು.
ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಸಕರ್ಾರಿ ಇಂಜನೀಯರಿಂಗ್ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 