ಸಂಭ್ರಮದ ಹಾಲಸ್ವಾಮಿ ರಥೋತ್ಸವ
ಲೋಕದರ್ಶನವರದಿ
ಹಾವೇರಿ: ತಾಲೂಕಿನ ಸುಕ್ಷೇತ್ರ ಹನುಮನಹಳ್ಳಿ ಗ್ರಾಮದ ಹಾಲಶಿವಯೋಗಿಗಳವರ ಮುಳ್ಳುಗದ್ದುಗೆ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಸಂಜೆ ಮಹಾ ರಥೋತ್ಸವ ಯಶಸ್ವಿಯಾಗಿ ಜರುಗಿತು.
ಮಠದ ಗುರುಗಳಾದ ವೇ.ಮೂ. ಹಾಲಸಿದ್ಧರಾಮೆಶ್ವರ ಸ್ವಾಮಿಗಳ ಅಪ್ಪಣೆ ಮೇರೆಗೆ ಪ್ರತಿವರ್ಷದ ಪದ್ಧತಿಯಂತೆ ನಿಶಾನೆ ಹರಾಜು ಮಾಡಲಾಯಿತು. ನಂತರ ಆರಂಭಗೊಂಡ ರಥೋತ್ಸವವು ದೇವಸ್ಥಾನದ ಆವರಣದಲ್ಲಿ ಸಾಗಿ ನಂತರ ದೇವಸ್ಥಾನ ತಲುಪಿತು.
ನಂತರ ನಡೆದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಸಿದ್ಧರಾಮ ಶ್ರೀಗಳು ಗ್ರಾಮಸ್ಥರಿಗೆ ಆಶೀರ್ವಚನ ನೀಡಿದರು. ಇದೇ ವೇಳೆಯಲ್ಲಿ ಸಕಲ ಸದ್ಭಕ್ತ ಮಂಡಳಿಯ ಸದಸ್ಯರು, ಊರಿನ ಗಣ್ಯರು ಇತರರು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 