ಸಿಇಓ ಅವರಿಂದ ಮತಯಂತ್ರಗಳ ಬಳಕೆಯ ಪ್ರಾತ್ಯಕ್ಷಿಕೆ
ಹಾವೇರಿ08: ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತ ಇವರ ಸಹಯೋಗದಲ್ಲಿ ಹಾವೇರಿ ಕೆ.ಎಸ್.ಆರ್.ಟಿ.ಸಿ. (ಡಿಪೋ)ಘಟಕದಲ್ಲಿ ಸಿಬ್ಬಂದಿ ವರ್ಗದವರಿಗೆ ಶುಕ್ರವಾರ ಮತದಾರರ ಜಾಗೃತಿ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಪ್ರತಿಜ್ಞಾವಿಧಿ ಬೋಧಿಸಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಕೆ.ಲೀಲಾವತಿ ಅವರು ಸಾರಿಗೆ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿ, ಇದೇ ಎ. 23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸಾರಿಗೆ ಸಿಬ್ಬಂದಿಗಳು ತಪ್ಪದೇ ಮತದಾನಮಾಡಿ ತಮ್ಮ ಸಂವಿಧಾನ ಬದ್ಧ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಿಗೆ ಸ್ವತಃ ಮತಯಂತ್ರ ಬಳಕೆ ಕುರಿತಂತೆ ಪ್ರಾತ್ಯಕ್ಷಿಕೆ ನೀಡಿದರು. ಸಾರಿಗೆ ವಾಹನಗಳಿಗೆ ಮತದಾನ ಜಾಗೃತಿಯ ಭಿತ್ತಿಪತ್ರಗಳನ್ನು ಅಂಟಿಸಿದರು.
ತಾಲೂಕ ಪಂಚಾಯತಿ ಕಾರ್ಯನಿವರ್ಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಜಿಲ್ಲಾ ಪಂಚಾಯತಿ ಸಿಬ್ಬಂದಿ ವರ್ಗದವರು, ಸೆಕ್ಟರ್ ಅಧಿಕಾರಿಗಳು, ತಾಲ್ಲೂಕು ಪಂಚಾಯತ ಸಿಬ್ಬಂದಿ ವರ್ಗದವರು ಹಾಗೂ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 