ಝಾಕೀರ್ ನಾಯ್ಕನನ್ನು ಗಡಿಪಾರು ಮಾಡುವುದಿಲ್ಲ - ಮಲೇಷ್ಯಾ ಪ್ರಧಾನಿ ಮಹಾಥೀರ್ ಮಹಮದ್
ಲೋಕದರ್ಶನ ವರದಿ
ಕೌಲಾಲಂಪುರ: ವಿವಾದಿತ ಮುಸ್ಲಿಂ ಮತ ಪ್ರಚಾರಕ ಝಾಕೀರ್ ನಾಯ್ಕನನ್ನು ಗಡಿಪಾರು ಮಾಡುವುದಿಲ್ಲ ಎಂದು ಮಲೇಷ್ಯಾ ಪ್ರಧಾನಿ ಮಹಾಥೀರ್ ಮಹಮದ್ ಹೇಳಿದ್ದಾರೆಂದು ವರದಿಯಾಗಿದೆ. ಎಲ್ಲಿಯವರೆಗೆ ಅವರು ಯಾವುದೇ ಸಮಸ್ಯೆಯನ್ನು ಸೃಷ್ಟಿಸುವುದಿಲ್ಲವೋ ಅಲ್ಲಿಯವರೆಗೆ ಗಡಿ ಪಾರು ಮಾಡುವ ಪ್ರಶ್ನೆ ಇಲ್ಲ. ಅವರಿಗೆ ನಾವು ಶಾಶ್ವತ ವಸತಿಯನ್ನು ಕಲ್ಪಿಸುತ್ತೇವೆಂದು ಮಹಾಥೀರ್ ಮಹಮದ್ ಹೇಳಿರುವುದಾಗಿ ವರದಿಯಾಗಿದೆ. ತನ್ನನ್ನು ಮಲೇಷ್ಯಾದಿಂದ ಗಡಿಪಾರು ಮಾಡಲಾಗಿದೆ ಎನ್ನುವ ಮಾಧ್ಯಮದ ವರದಿಗಳನ್ನು ಝಾಕೀರ್ ತಳ್ಳಿ ಹಾಕಿದ್ದ ಝಾಕೀರ್ ನಾಯ್ಕ್ ಅನ್ಯಾಯದ ವಿಚಾರಣೆಯಿಂದ ಸುರಕ್ಷಿತವಾಗಿರುವವರೆಗೆ ನಾನು ಭಾರತಕ್ಕೆ ಮರಳುವುದಿಲ್ಲ ಎಂದಿದ್ದರು. ಢಾಕಾ ದಾಳಿ ನಡೆಸಿದ ಐಸಿಸ್ ಉಗ್ರರಿಗೆ ಪ್ರೇರಪಣೆ ನೀಡಿದ ಆರೋಪ ಝಾಕೀರ್ ನಾಯ್ಕ್ ಮೇಲೆ ಕೇಳಿ ಬಂದಿದ್ದು, 2016 ರಿಂದ ಮಲೇಷ್ಯಾದ ಪುತ್ರಜಯದಲ್ಲಿ ನೆಲೆಸಿದ್ದು, ಭಾರತಕ್ಕೆ ಮರಳಿಲ್ಲ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 