ಕಂಪ್ಲಿ: ಈಶ್ವರ ದೇವರ ಹೂವಿನ ರಥೋತ್ಸವ
ಲೋಕದರ್ಶನ ವರದಿ
ಕಂಪ್ಲಿ 22: ತಾಲ್ಲೂಕಿನ ಮೆಟ್ರಿ ಗ್ರಾಮದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಈಶ್ವರ ದೇವರ 9ನೇ ವರ್ಷದ ಹೂವಿನ ರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ಜರುಗಿತು.
ಈಶ್ವರ ದೇವಸ್ಥಾನದಿಂದ ಆರಂಭಗೊಂಡ ಹೂವಿನ ತೇರು ಗ್ರಾಮದ ಮುಖ್ಯರಸ್ತೆ ಮೂಲಕ ಎದುರು ಬಸವಣ್ಣನ ಕಟ್ಟೆಯವರೆಗೆ ಸಾಗಿ ಪುನಃ ಸ್ವಸ್ಥಾನಕ್ಕೆ ಮರಳಿತು.
ತೇರು ಸಾಗುವಾಗ ನೆರೆದಿದ್ದ ಭಕ್ತರು ಉತ್ತತ್ತಿ ತೂರಿ ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ತಾಷರಾಂಡೋಲು, ಡೊಳ್ಳು, ಮಂಗಲವಾದ್ಯ, ಹಗಲುವೇಷ ಕಲಾವಿದರು, ಜನಪದ ತಂಡದವರು ಭಾಗವಹಿಸಿದ್ದರು.
ಗಂಗೆಸ್ಥಳ ಮಹೋತ್ಸವ, ಈಶ್ವರ ದೇವರಿಗೆ ಮಹಾರುದ್ರಾಭಿಷೇಕ ಸೇರಿದಂತೆ ವಿವಿಧ ಧಾಮರ್ಿಕ ಕಾರ್ಯಕ್ರಮಗಳು ಜರುಗಿದವು
ಶ್ರೀ ನವಲಗುಂದ ನಾಗಲಿಂಗ ಶರಣರ ಪುರಾಣ ಪ್ರವಚನ ಮಹಾಮಂಗಲಗೊಂಡಿತು. ಲಿಂಗದಹಳ್ಳಿ ವೇದಮೂರ್ತಿ ಸೋಮಯ್ಯಶಾಸ್ತ್ರಿ ಪುರಾಣ ಪ್ರವಚನಕ್ಕೆ ಅಗ್ರಹಾರ ಸೋಮಶೇಖರಯ್ಯ ಗವಾಯಿಗಳ ಹಾರ್ಮೋನಿಯಂ, ಚನ್ನದಾರ ಅಂಜಿನಪ್ಪ ತಬಲಾಸಾಥ್ ನೀಡಿದರು. ಶ್ರೀ ಈಶ್ವರ ದೇವಸ್ಥಾನ ಸೇವಾ ಸಮಿತಿಯವರು, ಸಕಲ ಸದ್ಭಕ್ತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 