ಕಂಪ್ಲಿ: ಕಬಡ್ಡಿಯಲ್ಲಿ ಅಂಗವಿಕಲ ಎಂ.ರಾಜಸಾಬ್ ಸಾಧನೆ
ಲೋಕದರ್ಶನ ವರದಿ
ಕಂಪ್ಲಿ 28; ಅಂಗವಿಕಲರಿಗೆ ಅನುಕಂಪದ ಸಹಾಯ ನೀಡುವ ಬದಲಾಗಿ ಆತ್ಮಸ್ಥೈರ್ಯದ ಪ್ರೋತ್ಸಾಹದ ಅಗತ್ಯವಿದೆ' ಅಂಗವಿಕಲ ಕಬಡ್ಡಿ ಕ್ರೀಡಾಪಟು ಎಂ.ರಾಜಸಾಬ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಚಿನ್ನಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಅಂತರ ರಾಷ್ಟ್ರೀಯ ಅಂಗವಿಕಲರ ಪ್ಯಾರಾ ಒಲಂಪಿಕ್ ಕಬಡ್ಡಿ ಪಂದ್ಯಾವಳಿಯಲ್ಲಿ ನೇಪಾಳ ತಂಡದ ವಿರುದ್ಧ ಗೆಲುವು ಸಾಧಿಸಿ ಬಹುಮಾನ ಪಡೆದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಿಸಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಸ್. ನಾಗರಾಜ ಧ್ವಜಾರೋಹಣ ನೆರವೇರಿಸಿದರು. ಎಸ್ಡಿಎಂಸಿ ಅಧ್ಯಕ್ಷ ಎಸ್. ರಾಘವೇಂದ್ರ ಮತ್ತು ಸದಸ್ಯರು, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಮಾವಿನಹಳ್ಳಿ ಎಸ್. ಬಸವರಾಜ, ಟಿ. ಅಂಜಿನಿ, ಟಿ. ಸುಧಾಕರ, ಮುಖ್ಯ ಶಿಕ್ಷಕ ಜಿ. ಸಂಗನಗೌಡ, ಬಿ. ಹನುಮಂತಪ್ಪ, ನಿಂಗಪ್ಪ ಅಂಗಡಿ, ಮುಖಂಡರು, ಪಾಲಕ, ಪೋಷಕರು ಹಾಜರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 