ಕಂಪ್ಲಿ: ನೈಸರ್ಗಿಕ ಪೌಷ್ಟಿಕ ಆಹಾರ ಪ್ರದರ್ಶನ
ಲೋಕದರ್ಶನ ವರದಿ
ಕಂಪ್ಲಿ 22: ಇಲ್ಲಿಯ ಬ್ರೈಟ್ ವೇ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೈಸಗರ್ಿಕ ಪೌಷ್ಟಿಕ ಆಹಾರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ ಜರುಗಿತು
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಶಿವರಾಜ್ ಪ್ರದರ್ಶನಕ್ಕೆ ಚಾಲನೆ ನೀಡಿ ಕಲಬೆರಕೆಯ ಆಹಾರ ಪದಾರ್ಥಗಳು ಸಾಮಾನ್ಯವಾಗಿದ್ದು ಅವುಗಳಲ್ಲಿ ಪೌಷ್ಟಿಕಾಂಶ ಹುಡುಕುವುದು ಅಸಾಧ್ಯವಾಗಿದೆ ಎಂದರು
ಯೋಗ ಗುರು ಬಸವರಾಜ ಮಾತನಾಡಿ, 'ರಾಸಾಯನಿಕ ಸಿಂಪಡಿಸಿ ಬೆಳೆದಿರುವ ಪದಾರ್ಥಗಳನ್ನು ಇಂದು ಅನಿವಾರ್ಯವಾಗಿ ಸೇವಿಸುತ್ತಿದ್ದೇವೆ. ಜೊತೆಗೆ ಮಕ್ಕಳನ್ನು ಕುರಕಲು ತಿಂಡಿ ದಾಸರನ್ನಾಗಿ ಮಾಡಿದ್ದೇವೆ. ಇನ್ನು ಮುಂದಾದರೂ ಆಹಾರ ಪದ್ಧತಿಯಲ್ಲಿ ಮೊಳಕೆಯೊಡೆದ ಧಾನ್ಯ, ಹಸಿ ಕಾಳು, ತಾಜಾ ಸೊಪ್ಪು, ತರಕಾರಿಗಳನ್ನು ಹೆಚ್ಚಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳುವಂತೆ' ಸಲಹೆ ನೀಡಿದರು.
ಪ್ರದರ್ಶನದಲ್ಲಿ ವಿವಿಧ ನಮೂನೆ ಮೊಳಕೆ ಕಾಳು, ಹಸಿರು ಸೊಪ್ಪು, ತಾಜಾ ತರಕಾರಿ, ಹಣ್ಣುಗಳು ಮಕ್ಕಳ, ಪೋಷಕರ, ಪಾಲಕರ ಗಮನಸೆಳೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸತ್ಯನಾರಾಯಣ, ಶಾಲೆಯ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಸಹ ಶಿಕ್ಷಕರಾದ ಚಂದ್ರಶೇಖರ, ರೋಷನ್ ಜಮೀರ್, ಶ್ಯಾಮ್ಸುಂದರರಾವ್, ವೆಂಕಟೇಶ, ರಿಯಾಜ್, ಅನುಪಮಾ ಸೇರಿ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 