ಕಂಪ್ಲಿ: ಶಾಲೆ ಪ್ರಾರಂಭೋತ್ಸವ: ಟ್ರ್ಯಾಕ್ಟರ್ನಲ್ಲಿ ಮಕ್ಕಳ ಪ್ರಭಾತಪೇರಿ
ಲೋಕದರ್ಶನ ವರಿ
ಕಂಪ್ಲಿ 30: 2019-20ನೇ ಶೈಕ್ಷಣಿಕ ವರ್ಷದಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಲ್ಲಿ ಮುಂದಾಗಬೇಕು ಎಂದು ಇಲ್ಲಿನ ಎಸ್ಎನ್ ಪೇಟೆ ಕ್ಲಸ್ಟರ್ ಸಿಆರ್ಪಿ ಜೆ.ಕೆ.ಮಂಜುನಾಥ ಹೇಳಿದರು.
ತಾಲೂಕಿನ ನಂ.1 ಇಟಗಿ ಗ್ರಾಮದ ಸಹಿಪ್ರಾ ಶಾಲೆಯಲ್ಲಿ, ಪ್ರಸಕ್ತ ಸಾಲಿನ ಶಾಲಾರಂಭೋತ್ಸವಕ್ಕೆ ಬೆಳಿಗ್ಗೆ 8ಗಂಟೆಗೆ ವಿದ್ಯುಕ್ತ ಚಾಲನೆ ನೀಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದ್ದು, ಮಕ್ಕಳನ್ನು ಮನೆಗೆಲಸ, ಹೊಲಗದ್ದೆ ಕೆಲಸ, ವೈಯಕ್ತಿಕ ಕೆಲಸಗಳಿಗೆ ಕಳಿಸಬಾರದು ಸಕರ್ಾರದ ಸೌಲಭ್ಯ ಸದುಪಯೋಗ ಪಡೆದು ಕೊಳ್ಳಿಎಂದರು ಟ್ರ್ಯಾಕ್ಟರ್ನಲ್ಲಿ ಮಕ್ಕಳನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು. ಶಾಲಾ ಪ್ರಾರಂಭೋತ್ಸವಕ್ಕಾಗಿ. 103ಮಕ್ಕಳು, ನಾಲ್ವರು ಶಿಕ್ಷಕರು ಶಾಲಾ ಪ್ರಾರಂಭೋತ್ಸವ ದಿನ ಹಾಜರಾಗಿ ಶೈಕ್ಷಣಿಕ ವಷರ್ಾರಂಭವನ್ನು ಸ್ವಾಗತಿಸಿದರು. ಮೇ.28ರಂದು ಶಾಲೆಯನ್ನು ಸ್ವಚ್ಚಗೊಳಿಸಿ, ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.
ಶಾಲಾ ಪ್ರಾರಂಭೋತ್ಸವದಲ್ಲಿ ಬಡ್ತಿ ಮುಖ್ಯಗುರು ವಿ.ಪಕ್ಕೀರಪ್ಪ, ಎಸ್ಡಿಎಂಸಿ ಅಧ್ಯಕ್ಷ ಹುಲುಗಪ್ಪ, ಗಣ್ಯರಾದ ಇ.ರವೀಂದ್ರಗೌಡ, ಶಿಕ್ಷಕರಾದ ಚಂದ್ರಯ್ಯ, ಪ್ರಭು, ಗಿರಿಜಾ, ಸಂತೋಷ್, ಎಸ್ಡಿಎಂಸಿ ಸದಸ್ಯರಾದ ಜಂಬಣ್ಣ, ಓಂಕಾರಪ್ಪ, ಗ್ರಾಪಂ ಸದಸ್ಯರಾದ ಬಸಲಿಂಗಪ್ಪ ಗೌಡ, ಮಂಜುಳಾ, ಪಾರ್ವತಮ್ಮ, ಈರಮ್ಮ, ಗ್ರಾಮದ ಮುಖಂಡರಾದ ಶರಣಪ್ಪ ಗೌಡ, ನಬೀಸಾಬ್, ತಾಪಂ ಮಾಜಿ ಸದಸ್ಯ ವೆಂಕಟರಾಮರಾಜು ಸೇರಿ ಪೋಷಕರು, ಗ್ರಾಮಸ್ಥರು, ಶಾಲಾ ಮಕ್ಕಳು ಸಡಗರ ಸಂಭ್ರಮಗಳಿಂದ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 