ಕಂಪ್ಲಿ: ಮರದ ಕೊಂಬೆ ಬಿದ್ದು ನಾಲ್ಕು ಮನೆಗಳಿಗೆ ಹಾನಿ
ಲೋಕದರ್ಶನ ವರದಿ
ಕಂಪ್ಲಿ 20: ತಾಲೂಕಿನ ಹಳೇ ಚಿನ್ನಾಪುರದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಗಾಳಿ ಸಹಿತ ಮಳೆಯಿಂದಾಗಿ ಆಂಜನೇಯ ದೇವಸ್ಥಾನ ಬಳಿಯ ಬೃಹತ್ ಅರಳಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ 4 ಮನೆಗಳು ಹಾನಿಗೊಳಗಾಗಿವೆ.
ಕೊಂಬೆ ಬಿದ್ದ ರಭಸಕ್ಕೆ ಆಶ್ರಯ ಯೋಜನೆಯಡಿ ನಿರ್ಮಾಣವಾದ ಪೀರಾವಲಿ, ಖಾಸೀಂಸಾಬ್, ಶೇಕ್ಷಾವಲಿ, ಟಿ.ನಾರಾಯಣಗೆ ಸೇರಿದ ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಮನೆಯಲ್ಲಿನ ಸಾಮಗ್ರಿಗಳಿಗೆ ಹಾನಿಯಾಗಿದೆ. ಘಟನೆ ವೇಳೆ ಮನೆಯಲ್ಲಿದ್ದ ಖಾಸೀಂ ಸಾಬ್ ಪುತ್ರಿ ರಜಿಯಾ ಬೇಗಂ ಬಾಲಕಿ ತಲೆಗೆ ಪೆಟ್ಟು ಬಿದ್ದಿದೆ. ಖಾಸೀಂಸಾಬ್ಗೆ ಫ್ಯಾನ್ ರೆಕ್ಕೆಗಳು ತಗುಲಿ ಸಣ್ಣ ಪುಟ್ಟ ಗಾಯಗಳಾಗಿವೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹೊಸಪೇಟೆಯ ತಾಪಂ ಇಒ ಟಿ.ವೆಂಕೋಬಪ್ಪ ಮಾತನಾಡಿ, ಜಿಪಂ ಹಾಗೂ ಜಿಲ್ಲಾಧಿಕಾರಿಗೆ ಹಾನಿ ವರದಿ ಸಲ್ಲಿಸಲಾಗುವುದು. ಗ್ರಾಪಂಯಿಂದ ಹಾನಿಗೊಳಗಾದ ಮನೆ ಮಾಲೀಕರಿಗೆ 1000 ರೂ. ತಾತ್ಕಾಲಿಕ ಪರಿಹಾರವಾಗಿ ನೀಡಲಾಗುವುದು. ರಾಜೀವ್ ಗಾಂಧಿ ವಸತಿ ನಿಗಮಕ್ಕೆ ವರದಿ ನೀಡಿ ಮನೆಗಳನ್ನು ನಿಮರ್ಿಸಿಕೊಡಲಾಗುವುದು ಎಂದರು.
ಘಟನೆಯಲ್ಲಿ ಗಾಯಗೊಂಡ ಬಾಲಕಿ ರಜಿಯಾ ಬೇಗಂಗೆ ಪ್ರಾಥಮಿಕ ಚಿಕಿತ್ಸೆಗಾಗಿ 500 ರೂ. ನೀಡಿದರು. ಸಂತ್ರಸ್ತರಿಗೆ ಗ್ರಾಮದ ಸಕಿಪ್ರಾ ಶಾಲೆಗೆ ತೆರಳಿ ಪರಿಶೀಲಿಸಿ ಊಟ, ವಸತಿ ಕಲ್ಪಿಸಿಕೊಡುವ ತಾತ್ಕಾಲಿಕ ವ್ಯವಸ್ಥೆ ಮಾಡಿದರು. ಉಪತಹಸೀಲ್ದಾರ್ ಬಿ.ರವೀಂದ್ರಕುಮಾರ್, ತಾಪಂ ಸದಸ್ಯ ಸಿ.ಡಿ.ಮಹಾದೇವ ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 