ಕಂಪ್ಲಿ: ಶಾಲೆ ಮಕ್ಕಳಿಗೆ ಸಮವಸ್ತ್ರ ವಿತರಣೆ
ಲೋಕದರ್ಶನ ವರದಿ
ಕಂಪ್ಲಿ 09: ಕ್ರಿಕೆಟ್ ಪಂದ್ಯಾವಳಿಯಲ್ಲಿ ಗಳಿಸಿದ ಮೊದಲನೆ ಬಹುಮಾನದ ಹಣವನ್ನು ದುಂದುವೆಚ್ಚ ಮಾಡದೆ, ಯುವಕರು ನೇರವಾಗಿ ಸ.ಹಿ.ಪ್ರಾ.ಶಾಲೆ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ನೀಡುತ್ತಿರುವುದು .ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ತಾಲ್ಲೂಕಿನ ಪ್ರಭುಕ್ಯಾಂಪಿನ ಸಕಿಪ್ರಾ ಶಾಲೆ ಮಕ್ಕಳಿಗೆ ಸಮವಸ್ತ್ರ, ಬೆಲ್ಟ್, ನೋಟುಪುಸ್ತಕಗಳನ್ನು ವಿತರಿಸಿ ಮಾತನಾಡಿ, ಫ್ಯಾಕ್ಟ್ರಿಯಲ್ಲಿ ಜರುಗಿದ ಎಫ್ಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಲ್ಲಿಕಾರ್ಜುನ ಪ್ರಾಂಚೈಸಿಯಲ್ಲಿ, ಮೋಹನರೆಡ್ಡಿ, ರವಿ ನಾಯಕತ್ವದಲ್ಲಿ 15,000ರೂ.ಗಳ ಮೊದಲ ಬಹುಮಾನ ಗಳಿಸಿದ್ದು, ಈ ಹಣವನ್ನು ಶಾಲಾ ಮಕ್ಕಳ ಸಮವಸ್ತ್ರ, ಬೆಲ್ಟ್, ನೋಟುಪುಸ್ತಕಗಳಿಗಾಗಿ ವಿನಿಯೋಗಿಸಿದ್ದು ಶ್ಲಾಘನೀಯವಾಗಿದೆ ಎಂದು ಹೇಳಿದರು.
90ಮಕ್ಕಳಿಗೆ ಸಮವಸ್ತ್ರ ವಿತರಿಸುವ ಸಂದರ್ಭದಲ್ಲಿ ಮಲ್ಲಿಕಾಜರ್ುನ, ಮೋಹನರೆಡ್ಡಿ, ರವಿ, ಗ್ರಾಪಂ ಸದಸ್ಯರಾದ ಬಿ.ಹೊನ್ನೂರಪ್ಪ, ಟಿ.ತಾಯಣ್ಣ ಜಿ.ಪದ್ಮಾವತಿ, ಮುಖ್ಯಗುರು ಚಂದ್ರಪ್ಪ, ಹನುಮಂತಪ್ಪ, ಜಿಪಂ ಸದಸ್ಯ ಕೆ.ಶ್ರೀನಿವಾಸರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಟ್ಗಿ ಬಸವರಾಜಗೌಡ, ಬಿ.ಜಾಫರ್, ಕಾಕರ್ಲ ಸುಧಾಕರ, ವೀರಾಂಜನೇಯಲು, ಇಸ್ಮಾಯಿಲ್ ಬೇಗ್ ಸೇರಿ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 