ಕಂಪ್ಲಿ ಶಾಸಕ ಗಣೇಶಗೆ ಷರತ್ತುಬದ್ದ ಜಾಮಿನು
ಬೆಂಗಳೂರು, ಏ 24 ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಕಂಪ್ಲಿ ಶಾಸಕ ಗಣೇಶ್ ಅವರಿಗೆ ರಾಜ್ಯ ಹೈಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ಮುಂಜೂರು ಮಾಡಿದೆ. ಈಗಲ್ಟನ್ ರೆಸಾಟ್ರ್ನಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ಹೊಡೆದಾಡಿಕೊಂಡಿದ್ದರು. ಆಗ ಆನಂದ್ ಸಿಂಗ್ ಮಾರಣಾಂತಿಕವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಹಲ್ಲೆಯಿಂದಾಗಿ ಕಣ್ಣು ಮತ್ತು ತಲೆಗೆ ತೀವ್ರ ಪೆಟ್ಟಾಗಿದ್ದ ಆನಂದ್ ಸಿಂಗ್ ಅವರನ್ನು ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಘಟನೆ ಸಂಬಂಧ ಶಾಸಕ ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಗೊಳಿಸಲಾಗಿತ್ತು. ನಂತರ, ಶಾಸಕ ಗಣೇಶ್ ತಲೆ ಮರೆಸಿಕೊಂಡಿದ್ದರು. ಬಿಡದಿ ಪೊಲೀಸರು ತೀವ್ರ ಹುಡುಕಾಟ ನಡೆಸಿ ಅಂತಿಮವಾಗಿ ಅವರನ್ನು ಫೆ. 20 ರಂದು ಗುಜರಾತ್ನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಜಾಮೀನು ಪಡೆಯಲು ಕಂಪ್ಲಿ ಗಣೇಶ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಪ್ರಯತ್ನ ನಡೆಸಿದ್ದರು. ಆದರೆ, ಅವರ ಜಾಮೀನು ಅರ್ಜಿ ಅಲ್ಲಿ ತಿರಸ್ಕಾರವಾಗಿತ್ತು. ಇದಾದದ ಬಳಿಕ ಕಂಪ್ಲಿ ಗಣೇಶ್ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈ ಕೋಟರ್್ ಏಕ ಸದಸ್ಯ ಪೀಠ ಗಣೇಶ್ಗೆ ಷರತ್ತುಬದ್ದ ಜಾಮೀನು ಮುಂಜೂರು ಮಾಡಿದೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 