ಮಳೆರಾಯನ ಕೃಪೆಗಾಗಿ ಕಪ್ಪೆಗಳ ಮದುವೆ ಮಾಡಿದ ಮುದೇನೂರ ಗ್ರಾಮಸ್ಥರು
ಮಳೆರಾಯನ ಕೃಪೆಗಾಗಿ ಮುದೇನೂರ ಗ್ರಾಮಸ್ಥರು ಕಪ್ಪೆಗಳ ಮದುವೆ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು.
ಲೋಕದರ್ಶನ ವರದಿ
ರಾಮದುರ್ಗ: ಪ್ರಾರಂಭದಲ್ಲಿ ಆದ ಅಲ್ಪಸ್ವಲ್ಪ ಮಳೆಯನ್ನು ನಂಬಿ, ಮಳೆರಾಯನ ಕೃಪೆಯ ಭರವಸೆಯಲ್ಲಿ ಭೂಮಿ ಬಿತ್ತನೆ ಮಾಡಿದ ರೈತರಿಗೆ ಮತ್ತೆ ಮಳೆಯಾಗದೇ ಆತಂಕದ ಛಾಯೆ ಅಧಿಕೊಗೊಳ್ಳುತ್ತಿರುವುದು ಒಂದೆಡೆದಾರೆ, ಮೊತ್ತೊಂದೆಡೆ ಕತ್ತೆ, ಕಪ್ಪೆಗಳ ಮದುವೆ ಮಾಡುವ ಪರಂಪರೆಯಿಂದರೂ ರೈತರು ಇನ್ನು ಹೊರಬಂದಿಲ್ಲ.
ಇದಕ್ಕೆ ಸಾಕ್ಷಿ ಎಂಬಂತೆ ತಾಲೂಕಿನ ಮದೇನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಮುದೇನೂರ ಗ್ರಾಮದಲ್ಲಿ ಕಪ್ಪೆಗಳ ಮದುವೆ ಮಾಡಿ, ಮಳೆರಾಯನ ಕೃಪೆಗೆ ಅಂಗಲಾಚಿದ ಘಟನೆ ನಡೆದಿದೆ.
ಮದುವೆ ಊಟ ಉಣಬಡಿಸಿದ ರೈತರುಃ
ಮಾನವರಿಗೆ ಮಾಡುವ ಮದುವೆ ಸಂಪ್ರದಾಯದಂತೆ ಗಂಡು ಹೆಣ್ಣಿನ ಕಡೆಯಿಂದ ನಡೆಯಬೇಕಾದ ಮದುವೆ ಪೂರ್ವದ ವಿಶಿಷ್ಠ ಸಂಪ್ರದಾಯವನ್ನು ಆಚರಣೆ ಮಾಡಿ, ನಂತರ ಸೇರಿದಂತೆ ಸರ್ವ ಜನತೆಗೂ ಮುದವೆ ದಿಬ್ಬನದ ಊಟ ಉಣಬಡಿಸಿ ಸ್ಥಳೀಯ ದೇವರಲ್ಲಿ ಮಳೆಗಾಗಿ ಪ್ರಾರ್ಥಸಿದರು.
ಹೋಮ-ಹವನಃ
ನಾಡಿನಲ್ಲಿ ಮಳೆ ಬೆಳೆ ಸಮೃದ್ಧಿಯಾಗಲಿ ಎಂಬಂತೆ ವಿವಿಧ ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನ ನೆರವೇರಿಸುವ ಮೂಲಕ ರೈತರು ಮಳೆರಾಯನ ಕೃಪೆಗಾಗಿ ವಿವಿಧ ಸಂದ್ರದಾಯಗಳ ಆಚರಣೆಗೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಮುದೇನೂರ ಗ್ರಾಮಸ್ಥರಾದ ನಾಗಪ್ಪ ವಜ್ರಮಟ್ಟಿ, ತಿಮ್ಮಣ್ಣ ಹಕಾಟಿ, ಅಲ್ಲಿಸಾಬ ಕಡಕೋಳ, ಅಜರ್ುನ ಸಿಂಗಾಡಿ, ಬಸವರಾಜ ಗುಟ್ಟಿ ಸೇರಿದಂತೆ ಗ್ರಾಮದ ನೂರಾರು ಮಹಿಳೆಯರು ಹಾಗೂ ಇತರರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 