ಮಳೆರಾಯನ ಕೃಪೆಗಾಗಿ ಕಪ್ಪೆಗಳ ಮದುವೆ ಮಾಡಿದ ಮುದೇನೂರ ಗ್ರಾಮಸ್ಥರು
ಮಳೆರಾಯನ ಕೃಪೆಗಾಗಿ ಮುದೇನೂರ ಗ್ರಾಮಸ್ಥರು ಕಪ್ಪೆಗಳ ಮದುವೆ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು.
ಲೋಕದರ್ಶನ ವರದಿ
ರಾಮದುರ್ಗ: ಪ್ರಾರಂಭದಲ್ಲಿ ಆದ ಅಲ್ಪಸ್ವಲ್ಪ ಮಳೆಯನ್ನು ನಂಬಿ, ಮಳೆರಾಯನ ಕೃಪೆಯ ಭರವಸೆಯಲ್ಲಿ ಭೂಮಿ ಬಿತ್ತನೆ ಮಾಡಿದ ರೈತರಿಗೆ ಮತ್ತೆ ಮಳೆಯಾಗದೇ ಆತಂಕದ ಛಾಯೆ ಅಧಿಕೊಗೊಳ್ಳುತ್ತಿರುವುದು ಒಂದೆಡೆದಾರೆ, ಮೊತ್ತೊಂದೆಡೆ ಕತ್ತೆ, ಕಪ್ಪೆಗಳ ಮದುವೆ ಮಾಡುವ ಪರಂಪರೆಯಿಂದರೂ ರೈತರು ಇನ್ನು ಹೊರಬಂದಿಲ್ಲ.
ಇದಕ್ಕೆ ಸಾಕ್ಷಿ ಎಂಬಂತೆ ತಾಲೂಕಿನ ಮದೇನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಮುದೇನೂರ ಗ್ರಾಮದಲ್ಲಿ ಕಪ್ಪೆಗಳ ಮದುವೆ ಮಾಡಿ, ಮಳೆರಾಯನ ಕೃಪೆಗೆ ಅಂಗಲಾಚಿದ ಘಟನೆ ನಡೆದಿದೆ.
ಮದುವೆ ಊಟ ಉಣಬಡಿಸಿದ ರೈತರುಃ
ಮಾನವರಿಗೆ ಮಾಡುವ ಮದುವೆ ಸಂಪ್ರದಾಯದಂತೆ ಗಂಡು ಹೆಣ್ಣಿನ ಕಡೆಯಿಂದ ನಡೆಯಬೇಕಾದ ಮದುವೆ ಪೂರ್ವದ ವಿಶಿಷ್ಠ ಸಂಪ್ರದಾಯವನ್ನು ಆಚರಣೆ ಮಾಡಿ, ನಂತರ ಸೇರಿದಂತೆ ಸರ್ವ ಜನತೆಗೂ ಮುದವೆ ದಿಬ್ಬನದ ಊಟ ಉಣಬಡಿಸಿ ಸ್ಥಳೀಯ ದೇವರಲ್ಲಿ ಮಳೆಗಾಗಿ ಪ್ರಾರ್ಥಸಿದರು.
ಹೋಮ-ಹವನಃ
ನಾಡಿನಲ್ಲಿ ಮಳೆ ಬೆಳೆ ಸಮೃದ್ಧಿಯಾಗಲಿ ಎಂಬಂತೆ ವಿವಿಧ ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನ ನೆರವೇರಿಸುವ ಮೂಲಕ ರೈತರು ಮಳೆರಾಯನ ಕೃಪೆಗಾಗಿ ವಿವಿಧ ಸಂದ್ರದಾಯಗಳ ಆಚರಣೆಗೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಮುದೇನೂರ ಗ್ರಾಮಸ್ಥರಾದ ನಾಗಪ್ಪ ವಜ್ರಮಟ್ಟಿ, ತಿಮ್ಮಣ್ಣ ಹಕಾಟಿ, ಅಲ್ಲಿಸಾಬ ಕಡಕೋಳ, ಅಜರ್ುನ ಸಿಂಗಾಡಿ, ಬಸವರಾಜ ಗುಟ್ಟಿ ಸೇರಿದಂತೆ ಗ್ರಾಮದ ನೂರಾರು ಮಹಿಳೆಯರು ಹಾಗೂ ಇತರರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 