ಮೋದಿ ಸಂಯಮ ತೋರಬೇಕು: ಮನಮೋಹನ್ ಸಿಂಗ್
ನವದೆಹಲಿ, ನ.27- ಬಿಜೆಪಿಯೇತರ ಸಕರ್ಾರವಿರುವ ರಾಜ್ಯಗಳಿಗೆ ಭೇಟಿ ನೀಡುವಾಗ ಪ್ರಧಾನಿ ನರೇಂದ್ರ ಮೋದಿ ಸಂಯಮ ತೋರಿಸಬೇಕು, ಪ್ರಧಾನಿಯಾಗಿ ತಮ್ಮ ಗುಣ-ನಡತೆಗಳಿಂದ ಮಾದರಿಯಾಗಿರಬೇಕು ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ.
ಕೇಂದ್ರದ ಮಾಜಿ ಸಚಿವ ಮನೀಶ್ ತಿವಾರಿ ಬರೆದಿರುವ ಫೇಬಲ್ಸ್ ಆಫ್ ಫ್ರಾಕ್ಚಡರ್್ ಟೈಮ್ಸ್ ಪುಸ್ತಕವನ್ನು ದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾಗಿ ಕೆಲವು ಜವಾಬ್ದಾರಿಗಳನ್ನು ಪಾಲಿಸಬೇಕು ಎಂದು ಅವರಿಗೆ ಸಲಹೆ ನೀಡಲು ಬಯಸುತ್ತೇನೆ ಎಂದರು.
ಬಿಜೆಪಿ ಅಧಿಕಾರವಿರುವ ರಾಜ್ಯಗಳಿಗೆ ಹೋದಾಗ ಅವರ ವರ್ತನೆ ಬೇರೆಯದ್ದೇ ರೀತಿ ಇರುತ್ತದೆ.ಅಲ್ಲಿನ ಮುಖ್ಯಮಂತ್ರಿಗಳ ಜತೆ ಉತ್ತಮ ಬಾಂಧವ್ಯದಿಂದ ನಡೆದುಕೊಳ್ಳುತ್ತಾರೆ.ಅದೇ ಬಿಜೆಪಿಯೇತರ ಸಕರ್ಾರವಿರುವ ರಾಜ್ಯಗಳಿಗೆ ಹೋದಾಗ ಅಲ್ಲಿ ಸಂಯಮ ತೋರಿಸುವುದಿಲ್ಲ. ಅಲ್ಲಿ ಮಾತನಾಡುವಾಗ ದೇಶದ ನಾಯಕರಾಗಿ ಬಳಸಬಾರದ ಭಾಷೆಗಳನ್ನು ಬಳಸುತ್ತಾರೆ, ಅದು ಅವರಿಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಟೀಕಿಸಿದರು.
ದೇಶದ ಪ್ರಧಾನಿಯಾದವರು ಇತರರಿಗೆ ಮಾದರಿಯಾಗಿರಬೇಕು.ಅವರು ದೇಶದ ನಾಗರಿಕರಿಗೆ ಪ್ರಧಾನ ಮಂತ್ರಿ ಮತ್ತು ಅವರ ವರ್ತನೆ, ನಡತೆಗಳು ಮೌಲ್ಯಯುತವಾಗಿರಬೇಕು ಮತ್ತು ಅದು ಯಾವತ್ತೂ ಸ್ಥಿರವಾಗಿರಬೇಕು.ಆ ರೀತಿ ಇದ್ದರೆ ಮಾತ್ರ ಪ್ರಧಾನಿಯಾಗಲು ಸಾಧ್ಯ ಎಂದು ನೆರೆದ ಜನಸಮೂಹವನ್ನು ಉದ್ದೇಶಿಸಿ ಹೇಳಿದರು.
ಯುಪಿಎ ಸಕರ್ಾರವಿರುವ ಸಂದರ್ಭದಲ್ಲಿ ಬಿಜೆಪಿ ಅಧಿಕಾರವಿರುವ ರಾಜ್ಯಗಳಿಗೆ ಕೇಂದ್ರ ಸಕರ್ಾರ ತಾರತಮ್ಯ ಮಾಡುತ್ತಿರಲಿಲ್ಲ. ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೇಕಾದರೆ ಕೇಳಿ, ಅವರೇ ನನ್ನ ಮಾತನ್ನು ಒಪ್ಪುತ್ತಾರೆ ಎಂದರು.
ಭಾರತಕ್ಕೆ ಮೋದಿಯವರು ಪ್ರಧಾನ ಮಂತ್ರಿಯಾಗಿದ್ದು ಈ ದೇಶದ ದುರಂತ ಎಂದು ಮನಮೋಹನ್ ಸಿಂಗ್ ಈ ಹಿಂದೆ ಹೇಳಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 