ಮುದ್ದೇಬಿಹಾಳ; ಕೃಷ್ಣಾ ನದಿ ಪ್ರವಾಹ ಪರಿಸ್ಥಿತಿ ತೀವ್ರ ಸ್ವರೂಪ: ಜಿಲ್ಲಾಡಳಿತ ಕಾರ್ಯಾಚರಣೆ
ಲೋಕದರ್ಶನ ವರದಿ
ಮುದ್ದೇಬಿಹಾಳ 11: ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪ್ರವಾಹದಿಂದ ತೊಂದರೆಗೊಳಗಾಗಿ ಜಲಾವೃತಗೊಂಡ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದಲ್ಲಿ ಬರುವ ತಂಗಡಗಿ, ಕಮಲದಿನ್ನಿ, ಕುಂಚಗನೂರ, ದೇವೂರ, ನಾಗರಾಳ, ಹಂಡರಗಲ್ಲ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತವು ಸಮರೋಪಾದಿ ಕಾಯರ್ಾಚರಣೆ ನಡೆಸಿದೆ.
ಜನಪ್ರತಿನಿಧಿ, ಅಧಿಕಾರಿಗಳ ಭೇಟಿ:
ಜಲಾವೃತಗೊಂಡಿರುವ ಗ್ರಾಮಗಳಿಗೆ ಸ್ಥಳೀಯ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಎಸ್ಪಿ ಪ್ರಕಾಶ ನಿಕ್ಕಂ ಸೇರಿದಂತೆ 8ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಸ್ಥಳಾಂತರ ಪ್ರಕ್ರಿಯೆ ವೀಕ್ಷಿಸಿದರು. ಜಲಾವೃತ ಪ್ರದೇಶಗಳಲ್ಲಿ ಸಂಚರಿಸಿ ಬೆಳೆ ಹಾನಿ ಮತ್ತು ಜನವಸತಿಗೆ ಆಗಿರುವ ತೊಂದರೆ ಪರಿಶೀಲಿಸಿದರು. ಕಣ್ಣೀರು ಸುರಿಸಿದ ಸಂತ್ರಸ್ತರು:
ಹಲವೆಡೆ ತಮಗ ಒದಗಿದ ದುಸ್ಥಿತಿ ನೆನೆದು ಸಂತ್ರಸ್ತರು ಜನಪ್ರತಿನಿಧಿಗಳು, ಅಧಿಕಾರಿಗಳ ಎದುರು ಕಣ್ಣೀರು ಸುರಿಸಿದರು. ಹಿಂದೆ ಎಂದೂ ಇಂಥ ಪರಿಸ್ಥಿತಿ ಬಂದಿರಲಿಲ್ಲ. ಮನೆ ಮಠ ಬಿಟ್ಟು ಹೀಗೆ ಗುಳೆ ಹೋದವರಂತೆ ಹೋಗಿರಲಿಲ್ಲ. ಈಗಲೇ ಪರಿಸ್ಥಿತಿ ಇಷ್ಟೊಂದು ಗಂಭೀರವಾಗಿದೆ. ಮುಂದೆ ಹೇಗೆ ಅನ್ನೋ ಚಿಂತೆ ಈಗಲೇ ಕಾಡತೊಡಗಿದೆ. ವಯಸ್ಸಾದವರು, ಮಹಿಳೆಯರು, ಮಕ್ಕಳು ಪರಿಸ್ಥಿತಿ ಹೇಗೆ ಎದುರಿಸಬೇಕು ಅನ್ನೋದು ತಿಳಿಯದೆ ಸಂಕಟಪಡುತ್ತಿದ್ದಾರೆ ಎಂದು ಗೋಳು ತೋಡಿಕೊಂಡರು.
ನೀರಲ್ಲಿನ ಚಕ್ಕಡಿ ಎತ್ತಲು ಸಹಾಯ:
ಗಂಗೂರ, ಕಮಲದಿನ್ನಿ, ಕುಂಚಗನೂರ ಗ್ರಾಮಗಳಿಗೆ ಡಿಸಿ, ಎಸ್ಪಿ, ಎಸಿ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಆ ಸಂದರ್ಭ ಜಮೀನಿನಲ್ಲಿ ನಿಂತ ಪ್ರವಾಹದ ನಿರಿನ ಪರಿಶೀಲನೆ ನಡೆಸುತ್ತಿದ್ದಾಗ ರಸ್ತೆಪಕ್ಕದ ನೀರಿನಲ್ಲಿ ಚಕ್ಕಡಿಯೊಂದಿ ಮಗುಚಿ ಬಿದ್ದು ಅದನ್ನು ಮೇಲೆತ್ತಲು ಕೆಲ ಯುವಕರು ಪ್ರಯಾಸ ಪಡುತ್ತಿದ್ದರು. ಇದನ್ನು ನೋಡಿದ ಡಿಸಿ ವೈ.ಎಸ್.ಪಾಟೀಲ, ಎಸಿ ಸೋಮಲಿಂಗ ಗೆಣ್ಣೂರ, ಎಸ್ಪಿ ಪ್ರಕಾಶ ನಿಕ್ಕಂ ಮತ್ತಿತರರು ಚಕ್ಕಡಿ ಮೇಲೆತ್ತಲು ಕೈಜೋಡಿಸಿ ಮಾನವೀಯತೆ ಅನಾವರಣಗೊಳಿಸಿದರು.
ಅನ್ನಾಹಾರ ಮರೆತ ಅಧಿಕಾರಿಗಳು:
ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ನೇತೃತ್ವದಲ್ಲಿ ವಿಜಯಪುರ ಎಸಿ ಕಚೇರಿ ತಹಸೀಲ್ದಾರ್ ಜಿ.ಎಸ್.ಹಿರೇಮಠ, ಮುದ್ದೇಬಿಹಾಳ ಪ್ರಭಾರ ತಹಸೀಲ್ದಾರ್ ಎಂ.ಎನ್.ಚೋರಗಸ್ತಿ, ಜಿಲ್ಲಾ ನೋಡಲ್ ಅಧಿಕಾರಿ ಪ್ರಕಾಶ ಸೇರಿದಂತೆ ಹಲವು ಅಧಿಕಾರಿಗಳ ತಂಡ ಬೆಳಿಗ್ಗೆಯಿಂದಲೇ ಜಲಾವೃತ ಗ್ರಾಮಗಳಲ್ಲಿ ಬೀಡುಬಿಟ್ಟು ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಕಳಿಸಲು ಉಸ್ತುವಾರಿ ವಹಿಸಿದ್ದರು. ಈ ವೇಳೆ ಜನರ ಕಷ್ಟವನ್ನು ತಮ್ಮ ಕಷ್ಟ ಎಂದೇ ಭಾವಿಸಿದ ಅಧಿಕಾರಿಗಳು ಬಹು ಹೊತ್ತಿನವರೆಗೆ ಅನ್ನಾಹಾರ ಸೇವಿಸದೆ ಕಾಯರ್ಾಚರಣೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆ ನೀಡುತ್ತ ಕ್ರಿಯಾಶೀಲರಾಗಿ ರಕ್ಷಣಾ ಕಾರ್ಯದಲ್ಲಿ ನಿರತರಾದದ್ದು ಕಂಡುಬಂತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 