ನಿಜಗುಣ ದೇವರು ಅನ್ನದಾಸೋಹ, ಚಿಂತನದಾಸೋಹ ಸೇವೆ ಅನನ್ಯ: ಪ್ರಭುದೇವರು
ಘಟಪ್ರಭಾ 03: ಜ್ಞಾನ ಮತ್ತು ಮುಕ್ತಿ ಪಡೆಯಬೇಕಾದರೆ ಗುರು ಮುಖ್ಯವಾಗಿದ್ದಾನೆ. ವ್ಯಕ್ತಿ, ಮುಕ್ತಿ ಪಡೆಯಬೇಕಾದರೆ ಜ್ಞಾನಬೇಕು ಎಂದು ಕೊಟಬಾಗಿಯ ಸಿದ್ಧಾರೂಢಮಠದ ಪ್ರಭುದೇವರು ಹೇಳಿದರು.
ಅವರು ಸೋಮವಾರದಂದು ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿಜಿಯ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಅಮವಾಸ್ಯೆ ನಿಮಿತ್ಯ ಜರುಗಿದ ಮಾಸಿಕ ಸುವಿಚಾರ ಚಿಂತನಗೋಷ್ಠಿ ಹಾಗೂ ನಿಜಗುಣ ದೇವರ ಕಿರೀಟ ಪೂಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧ್ಯಾತ್ಮಿಕವಾಗಿ ಸಾಧನೆ ಮಾಡಬೇಕಾದರೂ ಸಹ ಜ್ಞಾನ ಅತ್ಯಂತ ಅವಶ್ಯವಾಗಿದೆ. ಈ ಭಾಗದ ಭಕ್ತರಿಗೆ ನಿಜಗುಣ ದೇವರು ದೇವ ರೂಪದಲ್ಲಿ ಗುರುಗಳಾಗಿ ಬಂದು ಶ್ರೀಮಠದಲ್ಲಿ ಅನ್ನದಾಸೋಹದ ಜೊತೆಗೆ ಜ್ಞಾನ ದಾಸೋಹವನ್ನು ನೀಡಿ ಭಕ್ತರ ಹಾಗೂ ಜನರ ಮನಸ್ಸುಗಳಿಸಿಕೊಂಡಿದ್ದಾರೆ. ಸದಾ ಹಸನ್ಮುಖಿಗಳಾಗಿ,ತಾಯಿಹೃದಯದ ನಿಜಗುಣ ದೇವರು ಶ್ರೀಮಠದ ಭಕ್ತರ ಪಾಲಿಗೆ ನೀತಿಯ ಗುರುಗಳಾಗಿ ನೀತಿಯ ವ್ಯಕ್ತಿತ್ವವನ್ನು ತಿಳಿಸಿಕೊಟ್ಟಿದ್ದಾರೆ. ಗುರುವಿನಲ್ಲಿ ಕರುಣಿಯಿದ್ದರೆ ಮಾತ್ರ ಗುರುವಾಗಲು ಸಾಧ್ಯವಾಗುತ್ತದೆ. ಭಗವಂತನ ಸ್ಮರಣೆ ಅಗತ್ಯವಾಗಿದೆ. ಗುರುವಿನ ಮತ್ತು ಶಿಷ್ಯನ ಸಂಬಂಧ ಅಪಾರವಾದದ್ದು ಆದ್ದರಿಂದ ನಿಜಗುಣ ದೇವರು ಗುರುವಿನ ಕೃಪಾ ಆಶೀವರ್ಾದದಿಂದ ಶ್ರೀಮಠವು ಸಮಾಜಸೇವೆ ಹಾಗೂ ಧಾಮರ್ಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಂಗಕ್ಕೆ ಒಯ್ಯುತ್ತಿದ್ದಾರೆ. ಘಟದಿಂದ ಮಠ ಬೆಳೆಯುವುದಕ್ಕೆ ಶ್ರೀಮಠವೇ ನಿದರ್ಶನವಾಗಿದೆ. ಶ್ರೀಮಠಕ್ಕೆ ನಾಡಿನ ಹಲವಾರು ಮಠಾಧೀಶರು ಆಗಮಿಸುತ್ತಿರುವುದು ನಿಜಗುಣ ದೇವರ ಕಾರ್ಯ ಮತ್ತು ಲಕ್ಷಾಂತರ ಭಕ್ತರೇ ಸಾಕ್ಷಿಯಾಗಿದ್ದಾರೆ ಎಂದರು.
ಸಾನಿಧ್ಯವನ್ನು ಶ್ರೀಮಠದ ನಿಜಗುಣ ದೇವರು ವಹಿಸಿದ್ದರು.
ಮೇಕಳಿ ಗ್ರಾಮದ ಭಕ್ತ ಗೋವಿಂದ ಬಡಿಗೇರ ಇವರಿಂದ ಅನ್ನ ದಾಸೋಹ ಹಾಗೂ ಪುಲಗಡ್ಡಿ ಗ್ರಾಮದ ಭಕ್ತ ಶ್ರೀಶೈಲ ಪಾಟೀಲ ಇವರಿಂದ ಚಿಂತನ ದಾಸೋಹ ಜರುಗಿತು.
ಹಣಮಂತ ದಾಸರ, ಹಣಮಂತ ಪಾದಗಟ್ಟಿ, ಗಂಗಾಧರ ಗಿಳಿಹೊಸೂರ ಅವರಿಂದ ಸಂಗೀತ ಸೇವೆ ಜರುಗಿತು. ಸಿದ್ದಲಿಂಗೇಶ್ವರ ಶಾಲಾ ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 