'ಭ್ರಷ್ಟಾಚಾರ ನಿಮರ್ೂಲನೆಗೆ ನೋಟ್ ಬ್ಯಾನ್ ಔಷಧಿ
ಭೋಪಾಲ್: ದೇಶದಲ್ಲಿ ಬಲವಾಗಿ ಬೇರೂರಿದ್ದ ಭ್ರಷ್ಟಾಚಾರ ವ್ಯವಸ್ಥೆಯನ್ನು ಬುಡಸಮೇತ ಕಿತ್ತುಹಾಕಿ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೋಟು ಅಮಾನ್ಯೀಕರಣ ಎಂಬ ಔಷಧಿಯನ್ನು ನೀಡಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಾಬ್ವಾದಲ್ಲಿ ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿನ ಭ್ರಷ್ಟಾಚಾರ ನಿಮರ್ೂಲನೆ ಮಾಡಲು ಕಷಾಯ ರೀತಿಯಲ್ಲಿ ನೋಟ್ ಅಮಾನ್ಯತೆಯನ್ನು ಬಳಸಲಾಗಿದೆ ಎಂದರು.
ಕಾಖರ್ಾನೆ, ಕಚೇರಿ, ಮನೆ ಹಾಗೂ ಹಾಸಿಗೆ ಅಡಿಯಲ್ಲಿ ಹಣ ಇಟ್ಟಿದ್ದ ಜನರು ಇಂದು ಪ್ರತಿಯೊಂದು ಪೈಸೆಗೆ ತೆರಿಗೆ ಕಟ್ಟುವಂತಾಗಿದೆ. ಈ ಹಣವನ್ನು ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಉಪಯೋಗಿಸಲಾಗಿದೆ ಎಂದು ಹೇಳಿದರು. 2022ರೊಳಗೆ ರೈತರ ಆದಾಯ ದುಪ್ಪಟ್ಟುಗೊಳಿಸಲಾಗುವುದು ಎಂದು ಭರವಸೆ ನೀಡಿದ ಪ್ರಧಾನಿ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಯಾವುದೇ ಗ್ಯಾರಂಟಿ ಇಲ್ಲದೆ 14 ಕೋಟಿ ಜನರಿಗೆ ಕೇಂದ್ರಸಕರ್ಾರ ಸಾಲ ನೀಡಿದೆ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 