ಅಪಾಯಕ್ಕೆ ಆವ್ಹಾನಿಸುತ್ತಿರುವ ತೆರೆದ ಕೊಳವೆ ಬಾವಿ ವಿರುದ್ಧ ಸಾರ್ವಜನಿಕರ ಆಕ್ರೋಶthe public's against
ಲೋಕದರ್ಶನ ಸುದ್ದಿ
ಯಲಬುಗರ್ಾ: ಪಟ್ಟಣದ 1ನೇ ವಾಡರ್ಿನ ರುದ್ರಭಾವಿ ಹನುಮಂತ ದೇವರ ದೇವಸ್ಥಾನದ ಪಕ್ಕದಲ್ಲಿ ಪಪಂನಿಂದ ಕೊರೆಸಲಾದ ಕೊಳವೆ ಬಾವಿಯನ್ನು ಮುಚ್ಚದೇ ಹಾಗೇ ಬಿಡಲಾಗಿದೆ. ಇದರಿಂದ ಅಪಾಯದ ವಾತಾವರಣ ಸ್ಥಳೀಯ ನಿವಾಸಿಗಳಲ್ಲಿ ಮನೆ ಮಾಡಿದೆ.
ಕಳೆದ ಮೂರ್ನಾಲ್ಕು ತಿಂಗಳ ಹಿಂದಷ್ಟೆ ದೇವಸ್ಥಾನದ ಪಕ್ಕದಲ್ಲಿ ಕೊಳವೆ ಬಾವಿಯನ್ನು ಕೊರೆಸಲಾಗಿದೆ. ಅಂತರ್ಜಲ ಲಭ್ಯವಾಗದ ಕಾರಣ ಬಾವಿ ಸದ್ಯ ನಿರುಪಯುಕ್ತಗೊಂಡಿದೆ. ಕೊಳವೆ ಬಾವಿಯನ್ನು ಪಪಂ ಅಧಿಕಾರಿ, ಸಿಬ್ಬಂದಿಗಳು ಮುಚ್ಚದೇ ಹಾಗೇ ಬಿಟ್ಟಿದ್ದಾರೆ. ಸಣ್ಣ ಸಣ್ಣ ಮಕ್ಕಳು ದೇವಸ್ಥಾನದ ಹತ್ತಿರ ಆಟವಾಡಲು ಆಗಮಿಸುತ್ತಾರೆ. ತೆರೆದ ಕೊಳವೆ ಬಾವಿ ಹಾಗೇ ಬಿಟ್ಟಿರುವುದರಿಂದ ಪಾಲಕರಲ್ಲಿ ಭಯದ ಆತಂಕ ಮನೆ ಮಾಡಿದೆ. ಈ ಬಗ್ಗೆ ಹಲವು ಭಾರಿ ಪಪಂ ಅಧಿಕಾರಿ, ಸಿಬ್ಬಂದಿಗಳ ಗಮನಕ್ಕೆ ತರಲಾಗಿದೆ. ಆದರೆ, ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂಬುದು ನಿವಾಸಿಗಳು ಆರೋಪಿಸಿದ್ದಾರೆ.
ಒತ್ತಾಯ: ಸಣ್ಣ ಮಕ್ಕಳ ಹಿತ ದೃಷ್ಠಿಯಿಂದ ದೇವಸ್ಥಾನ ಹಾಗೂ ಕೆಂಪು ಕೆರೆಗೆ ತೆರಳುವ ರಸ್ತೆಗೆ ಹೊಂದಿಕೊಂಡ ತೆರೆದ ಕೊಳವೆ ಬಾವಿಗಳನ್ನು ಪಪಂ ಅಧಿಕಾರಿ, ಸಿಬ್ಬಂದಿಗಳು ಮುಚ್ಚಲು ಮುಂದಾಬೇಕು ಎಂದು ಸ್ಥಳೀಯ ನಿವಾಸಿಗಳಾದ ಗವಿಸಿದ್ಧಯ್ಯ ಗವಿಮಠ, ವೀರನಗೌಡ ಹೊಸಳ್ಳಿ, ಕಳಕಪ್ಪ ತಳವಾರ, ಹನುಮಂತಪ್ಪ ಎಮ್ಮಿಗುಡ್ಡದ್, ಸುರೇಶ ಕಮ್ಮಾರ, ಕಲ್ಲಪ್ಪ ಸಿಂಪರ್, ಮಲ್ಲಪ್ಪ ಸುರಕೋಡ ಇತರರು ಒತ್ತಾಯಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 