ಮಹಿಳಾ ಕಲಾವಿದರಿಂದ ಸರ್ಕಾರಿ ಯೋಜನೆಗಳ ಜಾಗೃತಿ
ಹಾವೇರಿ೨೨: ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಮಹಿಳಾ ಕಲಾ ತಂಡಗಳ ಮೂಲಕ ಸಕರ್ಾರದ ವಿವಿಧ ಯೋಜನೆಗಳ ಕುರಿತಾಗಿ ರಟ್ಟೀಹಳ್ಳಿ ತಾಲೂಕು ಹುಲ್ಲತ್ತಿ ಗ್ರಾಮ ಪಂಚಾಯತಿ ಹಿರೇಮತ್ತೂರ ಗ್ರಾಮದಲ್ಲಿ ಬೀದಿನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಆಯೋಜಿಸಲಾಯಿತು.
ದುರ್ಗಾ ದೇವಿ ಸಾಂಸ್ಕೃತಿಕ ಕಲಾತಂಡದಿಂದ ಪರಿಸರ ಜಾಗೃತಿ, ಸ್ವಚ್ಛತಾ ಆಂದೋಲನ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್, ಮೀನುಗಾರರ ಹಾಗೂ ನೇಕಾರರ ಸಾಲಮನ್ನಾ ಸೇರಿದಂತೆ ವಿವಿಧ ಯೋಜನೆಗಳ ಜಾಗೃತಿ ಗೀತೆಗಳ ಮೂಲಕ ಸಾರ್ವಜನಿಕರ ಗಮನ ಸೆಳೆಯಲಾಯಿತು.
ಕನ್ನಡತಿ ಕಲಾ ತಂಡದ ಮಹಿಳಾ ಕಲಾವಿದರು ಸರ್ಕಾರದ ವಿವಿಧ ಯೋಜನೆಗಳ ಆಧಾರಿತ ಬೀದಿನಾಟಕ ಪ್ರದರ್ಶನ ಮೂಲಕ ಗ್ರಾಮಸ್ಥರಿಗೆ ಯೋಜನೆಗಳ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳ ಕಿರು ಹೊತ್ತಿಗೆಯನ್ನು ವಿತರಿಸಲಾಯಿತು.
ಹಿರೇಮತ್ತೂರ ಗ್ರಾಮ ಪಂಚಾಯತಿ ಪಿಡಿಓ ಪಿ.ಎಚ್. ಗಿರಿಯಣ್ಣನವರ, ಗ್ರಾ.ಪಂ.ಸದಸ್ಯರಾದ ಎಂ.ಎಸ್.ಪಾಟೀಲ, ಶಾಲಾ ಶಿಕ್ಷಕರಾದ ಎಚ್.ಆರ್.ಮಾದರ,ವಾರ್ತ ಇಲಾಖೆಯ ರಾಮಚಂದ್ರ ಉಕ್ಕಲಿ ಇತರರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 