ಬೆಳಗಾವಿ ಪೊಲೀಸರಿಗೂ ಮೋಸ್ಟ್ ವಾಂಟೆಡ್ ರಶೀದ್ ಮಲಬಾರಿ
ಬೆಳಗಾವಿ: ಬೆಳಗಾವಿ ಪೊಲೀಸರಿಗೆ ಚಳ್ಳೆ ಹಣ್ಣು ತನ್ನಿಸಿ ಪರಾರಿಯಾಗಿದ್ದ ಪಾತಕಿ ರಶೀದ್ ಮಲಬಾರಿ ಇದೀಗ ಮತ್ತೆ ಸಿಕ್ಕಿಬಿದ್ದಿದ್ದಾನೆ.
ಉದ್ಯಮಿ ಪುತ್ರನ ಕೊಲೆ ಪ್ರಕರಣ ಹಾಗೂ ಬಿಲ್ಡರ್ಸ್ ಗಳಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ªÀÄvÉÛ
ಬೆಳಗಾವಿ ಪೊಲೀಸರು ಮಲಬಾರಿಯನ್ನು ವಶಕ್ಕೆ ಪಡೆಯಲಿದ್ದಾರೆ.
ಮೂರು ವರ್ಷಗಳ ಕಾಲ ಗಡಿ ಜಿಲ್ಲೆ ಬೆಳಗಾವಿಯನ್ನೇ ಕೇಂದ್ರ ಸ್ಥಾನವಾಗಿಸಿಕೊಂಡಿದ್ದ ರಶೀದ್ ಉತ್ತರ ಕರ್ನಾಟಕ ಭಾಗದ ಬಿಲ್ಡರ್ಸ್ ಹಾಗೂ ಹಣವಂತರಿಗೆ ಜೀವಬೆದರಿಕೆ, ಅಪಹರಣದಂಥ ಕೃತ್ಯ ಎಸಗುತ್ತಿದ್ದನು. ಬೆಳಗಾವಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಜೀರ್ ನದಾಫ್ ಅವರಿಗೆ ಸೇರಿದ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದ ಫಾರ್ಮ್ಹೌಸ್ನಲ್ಲಿ ರಶೀದ್ ಮಲಬಾರಿ ವಾಸ್ತವ್ಯ ಹೂಡುತ್ತಿದ್ದ. ಎರಡು ದಿನಗಳ ಹಿಂದೆ ಅಬುದಾಬಿಯಲ್ಲಿ ಸಿಕ್ಕಿ ಬಿದ್ದಿರುವ ದಾವೂದ್ ಬಂಟ ಹಾಗೂ ಭೂಗತ ಪಾತಕಿ ರಶೀದ್ ಮಲಬಾರಿಯನ್ನು ಬೆಳಗಾವಿ ಪೊಲೀಸರು ಬಂಧಿಸಲಿದ್ದಾರೆ.
ಬಿಲ್ಡರ್ ಶರೀಫ್ ಯರಗಟ್ಟಿ ಅವರಿಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮಲಬಾರಿ ಸಹಚರರನ್ನು ಬಂಧಿಸಿದ್ದರು. ಈ ವೇಳೆ ರಶೀದ್ ಮಲಬಾರಿ ಬೆಳಗಾವಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಪಾತಕಿ ರಶೀದ್ ಮಲಬಾರಿ ಬೆಳಗಾವಿಯಲ್ಲಿ ನೆಲೆಯೂರುತ್ತಿದ್ದ ಎಂಬ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಇಡೀ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 