ವಿವಿಧ ಜಿಲ್ಲೆಯ ಮಾದಿಗ ಸಮುದಾಯ ಯುವಕ-ಯುವತಿರಿಗಾಗಿ ವಿಚಾರ ಸಂಕಿರಣ ಕಾರ್ಯಕ್ರಮ
ಲೋಕದರ್ಶನ ವರದಿ ಹಾವೇರಿ : ಬಳ್ಳಾರಿ ಜಿಲ್ಲೆಯ ಹೊಸಪೇಟ ತಾಲೂಕಿನ ಹಂಪಿ ಸದ್ಗುರು ಶಿವರಾಮ ಅವಭೂತ ಕಲ್ಯಾಣ ಮಂಟಪದಲ್ಲಿ ಜುಲೈ 13 ರಿಂದ 15 ವರೆಗೆ ಯುವಕ-ಯುವತಿಯರಿಗಾಗಿ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಯ ಮಾದಿಗ ಜನಾಂಗದ ಪ್ರಜ್ಞಾವಂತರಿಗಾಗಿ ಸಮಾಜದ ಜಾಗೃತಿಗಾಗಿ ವಿಚಾರ ಸಂಕಿರಣ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ, ಭಾವರೂಪಕ ಪ್ರತಿಷ್ಠಾನ ಬೆಂಗಳೂರ, ಆದಿಜಾಂಬವ ಜಾಗೃತಿ ವೇದಿಕೆ ಬೆಂಗಳೂರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಎಚ್ ಆಂಜನೇಯ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಹೂಡಿ ವೆಂಕಟೇಶ ಚಿಂತಕರು ವಿಚಾರವಾದಿಗಳು ಬೆಂಗಳೂರ, ನಾಗರಾಜ ಎಂ ಹಾಗೂ ರಾಜ್ಯ ಮಾದಿಗ ಸಮುದಾಯದ ಗಣ್ಯಮಾನ್ಯರು, ಮಠಾಧೀಶರು ಭಾಗವಹಿಸಲಿದ್ದು, ಹಾವೇರಿ ಜಿಲ್ಲೆಯಿಂದ ಈ ವಿಚಾರ ಸಂಕಿರಣಕ್ಕೆ ಮಾದಿಗ ಸಮುದಾಯದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾದಿಗ ಸಮುದಾಯದ ಜಿಲ್ಲಾ ಮುಖಂಡ ಸಂಜಯಗಾಂಧಿ ಸಂಜೀವಣ್ಣನವರ, ಮಾರುತಿ ಬಣಕಾರ, ನಿಂಗಪ್ಪ ಕಡೂರ, ಮಂಜಪ್ಪ ಮರೋಳ, ಮಂಜುನಾಥ ದಡ್ಡೂರ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 