ವಿವಿಧ ಜಿಲ್ಲೆಯ ಮಾದಿಗ ಸಮುದಾಯ ಯುವಕ-ಯುವತಿರಿಗಾಗಿ ವಿಚಾರ ಸಂಕಿರಣ ಕಾರ್ಯಕ್ರಮ
ಲೋಕದರ್ಶನ ವರದಿ ಹಾವೇರಿ : ಬಳ್ಳಾರಿ ಜಿಲ್ಲೆಯ ಹೊಸಪೇಟ ತಾಲೂಕಿನ ಹಂಪಿ ಸದ್ಗುರು ಶಿವರಾಮ ಅವಭೂತ ಕಲ್ಯಾಣ ಮಂಟಪದಲ್ಲಿ ಜುಲೈ 13 ರಿಂದ 15 ವರೆಗೆ ಯುವಕ-ಯುವತಿಯರಿಗಾಗಿ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಯ ಮಾದಿಗ ಜನಾಂಗದ ಪ್ರಜ್ಞಾವಂತರಿಗಾಗಿ ಸಮಾಜದ ಜಾಗೃತಿಗಾಗಿ ವಿಚಾರ ಸಂಕಿರಣ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ, ಭಾವರೂಪಕ ಪ್ರತಿಷ್ಠಾನ ಬೆಂಗಳೂರ, ಆದಿಜಾಂಬವ ಜಾಗೃತಿ ವೇದಿಕೆ ಬೆಂಗಳೂರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಎಚ್ ಆಂಜನೇಯ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಹೂಡಿ ವೆಂಕಟೇಶ ಚಿಂತಕರು ವಿಚಾರವಾದಿಗಳು ಬೆಂಗಳೂರ, ನಾಗರಾಜ ಎಂ ಹಾಗೂ ರಾಜ್ಯ ಮಾದಿಗ ಸಮುದಾಯದ ಗಣ್ಯಮಾನ್ಯರು, ಮಠಾಧೀಶರು ಭಾಗವಹಿಸಲಿದ್ದು, ಹಾವೇರಿ ಜಿಲ್ಲೆಯಿಂದ ಈ ವಿಚಾರ ಸಂಕಿರಣಕ್ಕೆ ಮಾದಿಗ ಸಮುದಾಯದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾದಿಗ ಸಮುದಾಯದ ಜಿಲ್ಲಾ ಮುಖಂಡ ಸಂಜಯಗಾಂಧಿ ಸಂಜೀವಣ್ಣನವರ, ಮಾರುತಿ ಬಣಕಾರ, ನಿಂಗಪ್ಪ ಕಡೂರ, ಮಂಜಪ್ಪ ಮರೋಳ, ಮಂಜುನಾಥ ದಡ್ಡೂರ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 