ವಿವಿಧ ಜಿಲ್ಲೆಯ ಮಾದಿಗ ಸಮುದಾಯ ಯುವಕ-ಯುವತಿರಿಗಾಗಿ ವಿಚಾರ ಸಂಕಿರಣ ಕಾರ್ಯಕ್ರಮ
ಲೋಕದರ್ಶನ ವರದಿ ಹಾವೇರಿ : ಬಳ್ಳಾರಿ ಜಿಲ್ಲೆಯ ಹೊಸಪೇಟ ತಾಲೂಕಿನ ಹಂಪಿ ಸದ್ಗುರು ಶಿವರಾಮ ಅವಭೂತ ಕಲ್ಯಾಣ ಮಂಟಪದಲ್ಲಿ ಜುಲೈ 13 ರಿಂದ 15 ವರೆಗೆ ಯುವಕ-ಯುವತಿಯರಿಗಾಗಿ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಯ ಮಾದಿಗ ಜನಾಂಗದ ಪ್ರಜ್ಞಾವಂತರಿಗಾಗಿ ಸಮಾಜದ ಜಾಗೃತಿಗಾಗಿ ವಿಚಾರ ಸಂಕಿರಣ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ, ಭಾವರೂಪಕ ಪ್ರತಿಷ್ಠಾನ ಬೆಂಗಳೂರ, ಆದಿಜಾಂಬವ ಜಾಗೃತಿ ವೇದಿಕೆ ಬೆಂಗಳೂರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಎಚ್ ಆಂಜನೇಯ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಹೂಡಿ ವೆಂಕಟೇಶ ಚಿಂತಕರು ವಿಚಾರವಾದಿಗಳು ಬೆಂಗಳೂರ, ನಾಗರಾಜ ಎಂ ಹಾಗೂ ರಾಜ್ಯ ಮಾದಿಗ ಸಮುದಾಯದ ಗಣ್ಯಮಾನ್ಯರು, ಮಠಾಧೀಶರು ಭಾಗವಹಿಸಲಿದ್ದು, ಹಾವೇರಿ ಜಿಲ್ಲೆಯಿಂದ ಈ ವಿಚಾರ ಸಂಕಿರಣಕ್ಕೆ ಮಾದಿಗ ಸಮುದಾಯದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾದಿಗ ಸಮುದಾಯದ ಜಿಲ್ಲಾ ಮುಖಂಡ ಸಂಜಯಗಾಂಧಿ ಸಂಜೀವಣ್ಣನವರ, ಮಾರುತಿ ಬಣಕಾರ, ನಿಂಗಪ್ಪ ಕಡೂರ, ಮಂಜಪ್ಪ ಮರೋಳ, ಮಂಜುನಾಥ ದಡ್ಡೂರ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 