ಸಿದ್ದಾಪುರ: ಅರಣ್ಯಕ್ಕೆ ಬೆಂಕಿ: ಅಪಾರ ಬೆಲೆಬಾಳುವ ಮರಗಳ ಹಾನಿ
ಲೋಕದರ್ಶನ ವರದಿ
ಸಿದ್ದಾಪುರ 23: ತಾಲೂಕಿನ ಬೇಡ್ಕಣಿಯ ಕುಂಬ್ರಿಗದ್ದೆ ಸಮೀಪದ ಮಾಲ್ಕಿ ಬೆಟ್ಟ ಹಾಗೂ ಅರಣ್ಯಕ್ಕೆ ಬೆಂಕಿ ಬಿದ್ದು ನೂರಾರು ಬೆಲೆಬಾಳುವ ಗಿಡ-ಮರಗಳು ಸುಟ್ಟುಹೋಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಆಗಬಹುದಾದ ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ.
ಮಧ್ಯಾಹ್ನ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು ಬೆಂಕಿಯ ಕೆನ್ನಾಲಿಗೆಗೆ ಅರಣ್ಯದ ಜೀವಜಂತುಗಳು ಆಹುತಿ ಆಗಿದೆ. ಬೆಂಕಿನಂದಿಸುವಲ್ಲಿ ಅಗ್ನಿಶಾಮಕ ದಳದವರು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದು ಅಂದಾಜು ಮೂರು ಏಕರೆ ಪ್ರದೇಶ ಸುಟ್ಟು ಹೋಗಿದೆ. ಅರಣ್ಯ ಸಮೀಪ ಇರುವ ಒಂದೆರಡು ಮನೆಗೆ ಬೆಂಕಿ ತಗಲುವ ಸಾಧ್ಯತೆ ಇತ್ತು ಅದನ್ನು ಮುಂಜಾಗೃತಾವಾಗಿ ತಡೆಯಲಾಗಿದೆ ಎಂದು ಸಿದ್ದಾಪುರ ಉಪವಿಭಾಗದ ವಲಯ ಅರಣ್ಯಾಧಿಕಾರಿ ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 