ಸಿಂದಗಿ: ಯುವತಿ ಕೊಲೆ ಆರೋಪಿತರಿಗೆ ಶಿಕ್ಷೆ ನೀಡುವಂತೆ ಮನವಿ
ಲೋಕದರ್ಶನ ವರದಿ
ಸಿಂದಗಿ 02: ದೇವರ ಹಿಪ್ಪರಗಿ ತಾಲೂಕಿನ ಅಸಂತಾಪು ಗ್ರಾಮದ ಯುವತಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ಮಂಗಳವಾರ ತಾಲೂಕಿನ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಕರೆ ನೀಡಿದ ಹಿನ್ನಲೆಯಲ್ಲಿ ತಾಲೂಕಿನ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಮಹಿಳೆಯರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ರಸ್ತೆ ಬಂದ ಮಾಡಿ ಪ್ರತಿಭಟನೆ ನಡೆಸಿದರು. ಟಾಯರಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಷ ವ್ಯಕ್ತ ಪಡೆಸಿದರು.
ಪ್ರಗತಿಪರ ಸಂಘಟನೆಗಳ ಒಕ್ಕೂಟಗಳ ಮುಖಂಡರಾದ ರಾಜಕುಮಾರ ಭಾಸಗಿ, ಸಾಯಬಣ್ಣ ದೇವರಮನಿ, ಯಲ್ಲು ಇಂಗಳಗಿ, ರಾಜು ಗುಬ್ಬೇವಾಡ, ಸುನಂದಾ ಯಂಪೂರೆ, ಸರಸ್ವತಿ ಮಠ, ಅಯ್ಯಮ್ಮ ಸಿಂದಗಿ, ಗಂಗು ಜಾಲವಾದಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾಕಾರರು ತಹಶೀಲ್ದಾರ ಬಿ.ಎಸ್.ಕಡಕಬಾವಿ ಅವರ ಮೂಲಕ ರಾಜ್ಯ ಸರಕಾರದ ಗೃಹಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 