ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ನ.20ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿವಿಸಿಗೆ ಸುಪ್ರೀಂ ಸೂಚನೆ
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧದ ಆರೋಪಗಳಿಗೆ ಕೇಂದ್ರ ಜಾಗೃತ ಆಯೋಗದ ವರದಿಯನ್ನು(ಸಿವಿಸಿ) ಮುಚ್ಚಿದ ಲಕೋಟೆಯಲ್ಲಿ ನವೆಂಬರ್ 19ರ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ, ಕೇಂದ್ರ ಜಾಗೃತ ಆಯೋಗದ ವರದಿಯನ್ನು ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನೀಡಬೇಕೆಂದು ಹೇಳಿದೆ.
ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು, ಅಲೋಕ್ ವರ್ಮಾ ಮೇಲೆ ಕೇಳಿಬರುತ್ತಿರುವ ಆರೋಪಗಳ ಕುರಿತು ನೀಡಿರುವ ಸಿವಿಸಿ ವರದಿ ತುಂಬಾ ಪ್ರಶಂಸಾತ್ಮಕವಾಗಿಲ್ಲ, ಹೀಗಾಗಿ ಕೆಲವು ವಿಷಯಗಳಿಗೆ ಸಂಬಂಧಪಟ್ಟಂತೆ ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಮುಚ್ಚಿದ ಲಕೋಟೆಯಲ್ಲಿ ಸೋಮವಾರದೊಳಗೆ ವರದಿ ನೀಡಬೇಕು. ನ.20ರಂದು ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 