ತಾಳಿಕೋಟೆ: ಪೋಲಿಸ್ ಠಾಣೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ
ಲೋಕದರ್ಶನ ವರದಿ
ತಾಳಿಕೋಟೆ 06: ಪೋಲಿಸ್ ಠಾಣೆಗೆ ವಿಜಯಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಭೇಟಿ ನೀಡಿ ಠಾಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ಇಲಾಖೆಯ ಪೂರ್ವ ನಿರ್ಧರಿತ ಪ್ರವಾಸದಂತೆ ವರಿಷ್ಠಾಧಿಕಾರಿಗಳಾದ ಪ್ರಕಾಶ ನಿಕ್ಕಂ ಅವರು ತಾಳಿಕೋಟಿ ಪೋಲಿಸ್ ಠಾಣೆಗೆ ಭೇಟಿ ನೀಡಿ ಠಾಣೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಮಗ್ರ ಪರಿಶೀಲನೆಯ ನಂತರ ಠಾಣೆಯಲ್ಲಿಯ ಶಿಸ್ತು, ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧಗಳನ್ನು ನಿಯಂತ್ರಿಸಲು ತಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ನಂತರ ಪೊಲಿಸ್ ವಸತಿ ಗೃಹಕ್ಕೆ ಭೇಟಿ ನೀಡಿದ ಅವರು ಬಹುದಿನಗಳಿಂದ ಶಿಥಿಲಗೊಂಡಿರುವ ಕಟ್ಟಡದ ಕುರಿತು ಮಾಹಿತಿ ಪಡೆದುಕೊಂಡರು ಇದನ್ನು ಆದಷ್ಟು ಬೇಗ ಸರಿಪಡಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಮಹೇಶಗೌಡ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಗೋವಿಂದಗೌಡ ಪಾಟೀಲ, ಎಎಸ್ಐ ಆರ್.ಎಸ್.ಭಂಗಿ, ಎಸ್.ಪಿ. ಹಿಪ್ಪರಗಿ, ಕೆ.ಬಿ.ರೆಡ್ಡಿ, ಸಿಬ್ಬಂದಿಗಳಾದ ಆರ್.ಎಸ್.ಒಡೆಯರ, ಬಸವರಾಜ ಬಲಕಲ್, ಎಂ.ಎನ್.ದೊಡಮನಿ, ಸಂಜು ಜಾಧವ, ಎಂ.ಎಲ್.ಪಟ್ಟೇದ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 