ಮಹಾನಗರ ಪಾಲಿಕೆ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ : ಮಹಾನಗರ ಪಾಲಿಕೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಗುರುವಾರ ಜರುಗಿದ್ದು, ತೆರಿಗೆ ನಿಧರ್ಾರಣಾ, ಹಣಕಾಸು ಹಾಗೂ ಅಪೀಲು ಸ್ಥಾಯಿ ಸಮಿತಿಗೆ ಪುಂಡಲೀಕ ರಾಮಾ ಪರೀಟ ಆಯ್ಕೆಯಾಗಿದ್ದಾರೆ ಎಂದು ಪಾಲಿಕೆ ಮೇಯರ ಬಸಪ್ಪಾ ಚಿಕ್ಕಲದಿನ್ನಿ ಅಧಿಕೃತ ಘೋಷಣೆ ಮಾಡಿದರು.
ಗುರುವಾರ ಪಾಲಿಕೆ ಸಭಾಂಗಣದಲ್ಲಿ ಜರುಗಿದ ಚುನಾವಣೆ ಪ್ರಕ್ರಿಯೆಯಲ್ಲಿ ಬೆಳಿಗ್ಗೆಯಿಂದಲೇ ನಾಮಪತ್ರ ಸಲ್ಲಿಕೆಯಾಗಿದ್ದವು. ಮಧ್ಯಾಹ್ನ 11.30 ಚುನಾವಣೆ ನಡೆದು ಪಾಲಿಕೆ ಮೇಯರ ನಾಮಪತ್ರಗಳನ್ನು ಪರಿಶೀಲಿಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯಲ್ಲಿ ಮತ್ತೊಮ್ಮೆ ಮರಾಠಿ ಸದಸ್ಯರ ಕೈ ಮೇಲಾಗಿದೆ. ಸಾರ್ವಜನಿಕ ಆರೋಗ್ಯ ಶಿಕ್ಷಣ ಸಾಮಾಜಿಕ ನ್ಯಾಯ ಸಮಿತಿಗೆ ಸುಧಾ ಮನೋಹರ ಭಾತಕಾಂಡೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಗೆ ಬಾಂದುಗರ್ೆ ಮನೋಹರ ಮಷ್ಣು, ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗೆ ವೈಶಾಲಿ ರವೀಂದ್ರ ಹುಲಜಿ ಆಯ್ಕೆಯಾಗಿದ್ದಾರೆ ಎಂದು ಪಾಲಿಕೆಯ ಮೇಯರ್ ಘೋಷಣೆ ಮಾಡಿದರು.
ಸಭೆಯಲ್ಲಿ ಕನ್ನಡಿಗರ ನಗರ ಸೇವಕರ ಗೈರು ಸಂಖ್ಯೆ ಹೆಚ್ಚಾಗಿ ಕಂಡಿತ್ತು ಅಲ್ಲದೆ ಸ್ಥಾಯಿ ಸಮಿತಿಯ ಅಧ್ಯಕ್ಷರ ಸ್ಥಾನಗಳು ಮರಾಠಿಗರ ಪಾಲಾಯಿತು. ಉಪಮೇಯರ ಮದುಶ್ರೀ ಪೂಜಾರಿ, ಕೆಲವು ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 