ಜಿಲ್ಲಾ ಪಂಚಾಯತಿಯಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ
ಕೊಪ್ಪಳ 07: ಕೊಪ್ಪಳ ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ 30 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳನ್ನು ಶನಿವಾರದಂದು ಜಿಲ್ಲಾ ಪಂಚಾಯತಿ ಆವರಣದಲ್ಲಿ ಅಧ್ಯಕ್ಷರಾದ ರಾಜಶೇಖರ ಹಿಟ್ನಾಳ ಅವರು ವಿತರಿಸಿದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷರ 2017-18 ನೇ ಸಾಲಿನ ಅನಿರ್ಬಂಧಿತ ಅನುದಾನದ ಪೈಕಿ ಶೇ. 03 ರ ಅನುದಾನವನ್ನು ಅಂಗವಿಕಲರಿಗಾಗಿ ಮೀಸಲಿರಿಸಿದ್ದು, ಇದೀಗ ಜಿಲ್ಲೆಯ 30 ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನವನ್ನು ವಿತರಿಸಲಾಗಿದೆ. ಕೊಪ್ಪಳ ತಾಲೂಕಿನ 09 ಫಲಾನುಭವಿಗಳು, ಗಂಗಾವತಿ-08, ಕುಷ್ಟಗಿ-07 ಹಾಗೂ ಯಲಬುಗರ್ಾ ತಾಲೂಕಿನ 06 ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ವಿತರಿಸಲಾಯಿತು. ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನದ ಕೀ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಹಲವು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ವಿತರಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 