ಜಿಲ್ಲಾ ಪಂಚಾಯತಿಯಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ
ಕೊಪ್ಪಳ 07: ಕೊಪ್ಪಳ ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ 30 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳನ್ನು ಶನಿವಾರದಂದು ಜಿಲ್ಲಾ ಪಂಚಾಯತಿ ಆವರಣದಲ್ಲಿ ಅಧ್ಯಕ್ಷರಾದ ರಾಜಶೇಖರ ಹಿಟ್ನಾಳ ಅವರು ವಿತರಿಸಿದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷರ 2017-18 ನೇ ಸಾಲಿನ ಅನಿರ್ಬಂಧಿತ ಅನುದಾನದ ಪೈಕಿ ಶೇ. 03 ರ ಅನುದಾನವನ್ನು ಅಂಗವಿಕಲರಿಗಾಗಿ ಮೀಸಲಿರಿಸಿದ್ದು, ಇದೀಗ ಜಿಲ್ಲೆಯ 30 ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನವನ್ನು ವಿತರಿಸಲಾಗಿದೆ. ಕೊಪ್ಪಳ ತಾಲೂಕಿನ 09 ಫಲಾನುಭವಿಗಳು, ಗಂಗಾವತಿ-08, ಕುಷ್ಟಗಿ-07 ಹಾಗೂ ಯಲಬುಗರ್ಾ ತಾಲೂಕಿನ 06 ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ವಿತರಿಸಲಾಯಿತು. ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನದ ಕೀ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಹಲವು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ವಿತರಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 