ಇಂದು ಬೆಳಗಾವಿಗೆ ಪ್ರಮುಖಸಾಗರ ಶ್ರೀಗಳುtoday
ಬೆಳಗಾವಿ 3: ಜೈನ ಮುನಿ ಪ್ರಮುಖಸಾಗರಜೀ ಮುನಿಗಳು ಬುಧವಾರ ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ನಗರ ಪ್ರವೇಶ ಮಾಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೋಟೆ ಆವರಣದ ಬಳಿಯಿರುವ ಭರತೇಶ ಶಿಕ್ಷಣ ಸಂಸ್ಥೆಯ ಹತ್ತಿರ ಶ್ರೀಗಳನ್ನು ಜೈನ ಸಮಾಜದ ವತಿಯಿಂದ ಸ್ವಾಗತ ಕೋರಲಾಗುವುದು. ಶ್ರಿಗಳು ಮುಂದಿನ ಐದು ದಿನಗಳ ವರೆಗೆ ಬೆಳಗಾವಿ ಮಠ ಬೀದಿಯ ಚಿಕ್ಕ ಬಸದಿಯಲ್ಲಿ ವಾಸ್ತವ್ಯ ಮಾಡಲಿದ್ದು ಈ ಐದು ದಿನಗಳ ಕಾಲ ಮಧ್ಯಾಹ್ನ 3 ಗಂಟೆಗೆ ಪ್ರವಚನ ನೀಡಲಿದ್ದಾರೆ. ಹಾಗಾಗಿ ಜೈನ ಸಮಾಜ ಬಾಂಧವರು ಈ ಎಲ್ಲ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜದ ಮುಖಂಡರಾದ ರಾಜೀವ ದೊಡ್ಡಣ್ಣವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 