ಬೈಲಹೊಂಗಲ ಬಿಜೆಪಿಯಿಂದ ವಿಜೆಯೋತ್ಸವ
ಬೈಲಹೊಂಗಲ 10: ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದ್ದ ರಾಜ್ಯದ 15 ವಿಧಾನಸಭಾ ಮತಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ತಾಲೂಕಿನ ದೊಡವಾಡ ಗ್ರಾಮದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಕರ್ನಾಟಕ ಅಭಿವೃದ್ಧಿ ಕಾಣಲಿದೆ ಎಂಬ ಭರವಸೆಯೊಂದಿಗೆ ಮತದಾರರು 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಇದೊಂದು ಅಭೂತಪೂರ್ವ ಗೆಲುವು. ಈ ವಿಜಯದಿಂದ ಮುಂದೆ ರಾಜ್ಯದ ಜನರ ಮನಸ್ಸಿನಲ್ಲಿದ್ದ ಅಸ್ಥಿರ ಸರಕಾರದ ಮನೋಭಾವ ದೂರಾಗಿದೆ. ಇನ್ನು ಮುಂದೆ ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆೆ ಎಂದರು.
ಶ್ರೀಶೈಲ ಎಡಳ್ಳಿ, ನಿಂಗಪ್ಪ ಚೌಡಣ್ಣವರ,ಉದಯ ಕೊಟಬಾಗಿ, ಬಸವರಾಜ ನೇರಗಿ, ಮಡಿವಾಳಪ್ಪ ಚಳಕೊಪ್ಪ, ಗದಿಗೆಪ್ಪ ಶಿವಧೂತನವರ, ಈರಪ್ಪ ಗಂಟಿ, ಬಸವಂತ ಜಮನೂರ,ರಾಮಣ್ಣ ಇಂಗಳೆ, ಬಸವರಾಜ ಧಾರವಾಡ, ಶಂಕ್ರಪ್ಪ ಅಂದಾನಶೆಟ್ಟಿ, ಚನ್ನಯ್ಯ ದಾಭಿಮಠ, ಆನಂದ ಅಸುಂಡಿ,ಗೋವಿಂದ ಸಂಗೊಳ್ಳಿ, ಅಪ್ಪು ಅಸುಂಡಿ,ಮುದಕಪ್ಪ ಗಾಯಕವಾಡ, ಮಹಾಂತೇಶ ಅಸುಂಡಿ ಸೇರಿದಂತೆ ನೂರಾರು ಕಾರ್ಯಕರ್ತರು ಸೇರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 