ಬೈಲಹೊಂಗಲ ಬಿಜೆಪಿಯಿಂದ ವಿಜೆಯೋತ್ಸವ
ಬೈಲಹೊಂಗಲ 10: ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದ್ದ ರಾಜ್ಯದ 15 ವಿಧಾನಸಭಾ ಮತಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ತಾಲೂಕಿನ ದೊಡವಾಡ ಗ್ರಾಮದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಕರ್ನಾಟಕ ಅಭಿವೃದ್ಧಿ ಕಾಣಲಿದೆ ಎಂಬ ಭರವಸೆಯೊಂದಿಗೆ ಮತದಾರರು 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಇದೊಂದು ಅಭೂತಪೂರ್ವ ಗೆಲುವು. ಈ ವಿಜಯದಿಂದ ಮುಂದೆ ರಾಜ್ಯದ ಜನರ ಮನಸ್ಸಿನಲ್ಲಿದ್ದ ಅಸ್ಥಿರ ಸರಕಾರದ ಮನೋಭಾವ ದೂರಾಗಿದೆ. ಇನ್ನು ಮುಂದೆ ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆೆ ಎಂದರು.
ಶ್ರೀಶೈಲ ಎಡಳ್ಳಿ, ನಿಂಗಪ್ಪ ಚೌಡಣ್ಣವರ,ಉದಯ ಕೊಟಬಾಗಿ, ಬಸವರಾಜ ನೇರಗಿ, ಮಡಿವಾಳಪ್ಪ ಚಳಕೊಪ್ಪ, ಗದಿಗೆಪ್ಪ ಶಿವಧೂತನವರ, ಈರಪ್ಪ ಗಂಟಿ, ಬಸವಂತ ಜಮನೂರ,ರಾಮಣ್ಣ ಇಂಗಳೆ, ಬಸವರಾಜ ಧಾರವಾಡ, ಶಂಕ್ರಪ್ಪ ಅಂದಾನಶೆಟ್ಟಿ, ಚನ್ನಯ್ಯ ದಾಭಿಮಠ, ಆನಂದ ಅಸುಂಡಿ,ಗೋವಿಂದ ಸಂಗೊಳ್ಳಿ, ಅಪ್ಪು ಅಸುಂಡಿ,ಮುದಕಪ್ಪ ಗಾಯಕವಾಡ, ಮಹಾಂತೇಶ ಅಸುಂಡಿ ಸೇರಿದಂತೆ ನೂರಾರು ಕಾರ್ಯಕರ್ತರು ಸೇರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 